Site icon PowerTV

ರಾಜ್ಯ ಸರ್ಕಾರ ಕರಸೇವಕರ ಮೇಲೆ ದಬ್ಬಾಳಿಕೆ ಮಾಡ್ತಿದೆ: ಹೆಚ್‌ಡಿಕೆ ವಾಗ್ದಾಳಿ

ಬೆಂಗಳೂರು: ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ.ಇದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಅಯೋಧ್ಯೆ ಉದ್ಘಾಟನೆ ಬಗ್ಗೆ ದೇಶದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದೇವೆ. ರೈತರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಸರ್ಕಾರಕ್ಕೆ ಇದ್ಯಾವುದರ ಕಾಳಜಿ ಇಲ್ಲ. ಇಂತಹ ವಿಷಯ ಮುನ್ನಲೆಗೆ ತಂದು ವಿಷಯ ಡೈವರ್ಟ್ ಮಾಡ್ತಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣ ದೊಡ್ಡದು ಮಾಡಿದ್ದಾರೆ. ಎಲ್ಲಾ ಕೇಸ್ ಖುಲಾಸೆ ಆಗಿದೆ. ಮಾಧ್ಯಮಗಳೇ ಇದನ್ನ ತೋರಿಸಿವೆ ಎಂದು ತಿಳಿಸಿದರು.

ಇದನ್ನೂ ಓದಿ: ನಿಮ್ಮದೇ ಸರ್ಕಾರವಿದ್ದಾಗ ಯಾಕೆ ಕರಸೇವಕರ ಕೇಸ್‌ ವಾಪಸ್ ಪಡೆದಿಲ್ಲ?: ಜಗದೀಶ್ ಶೆಟ್ಟರ್

ಕರಸೇವಕರ ಮೇಲೆ ಸರ್ಕಾರ ದಬ್ಬಾಳಿಕೆ ಮಾಡ್ತಿದೆ. ಈದ್ಗಾ ಮೈದಾನದಲ್ಲಿ ಗಲಾಟೆ ಆಗಿದ್ದಾಗ ದೇವೇಗೌಡರು ಹೇಗೆ ನಿಭಾಯಿಸಿದರು ಅಂತಾ ಗೊತ್ತಿದೆ. ಈ ಸರ್ಕಾರ ವಿರೋಧಿಗಳ ಮೇಲೆ ದಬ್ಬಾಳಿಕೆ ಮಾಡೋ ಕೆಲಸ ಮಾಡ್ತಿದೆ ಎಂದು ಟೀಕಿಸಿದರು.

ಪ್ರತಾಪ್ ಸಿಂಹ ಸಹೋದರನ ಮೇಲೆ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ. ಕಾಂಗ್ರೆಸ್ ಅವರು ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಕರಸೇವಕರ ಮೇಲೆ ದೌರ್ಜನ್ಯ. ಇದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು

 

 

 

 

 

Exit mobile version