Monday, August 25, 2025
Google search engine
HomeUncategorizedಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ: ಪರಮೇಶ್ವರ್ 

ಬಿಜೆಪಿ ಹೇಳಿದ ಹಾಗೆ ಕೇಳಿದ್ರೆ ನಾವು ಆಡಳಿತ ಮಾಡೋಕಾಗಲ್ಲ: ಪರಮೇಶ್ವರ್ 

ಬೆಂಗಳೂರು: ಬಿಜೆಪಿ ಅವರು ಹೇಳಿದಂತೆ ನಾವು ಕೇಳೋಕೆ ಶುರು ಮಾಡಿದ್ರೆ, ನಾವು ಆಡಳಿತ ಮಾಡೋಕೆ ಆಗಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್​ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಹಾವೇರಿ ರೇಪ್ ಕೇಸ್ ಪ್ರಕರಣದಲ್ಲಿ ಎಸ್‌ಐಟಿ ರಚನೆಗೆ ಆಗ್ರಹಿಸಿದ ವಿಚಾರ ಹಾಗೂ ಕೇಸ್‌ಗೆ ಸಂಬಂಧಿಸಿದವರ ಬಂಧನ ಆಗಿದೆ ಎಂಬ ಸಂತ್ರಸ್ತೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗ ತನಿಖೆ ಆಗುತ್ತಿದೆ ಎಂದರು.ಸಂಪೂರ್ಣ ತನಿಖೆ ಆಗಲಿ. ಅಲ್ಲಿಯವರೆಗೂ ನಾನೇನು ಹೇಳಲ್ಲ.ಈಗಾಗಲೇ 7-8 ಜನ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ: ಹಾವೇರಿ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು ಲೈಸೆನ್ಸ್​ ಕೊಟ್ಟಂತಾಗಿದೆ: ಬೊಮ್ಮಾಯಿ

ಈ ಮಧ್ಯೆ ಸಂತ್ರಸ್ತೆ ಊರಿಗೆ ಹೋಗಬೇಕು ಅಂದಿದ್ದಾರೆ. ಅದಕ್ಕೆ ಕಳುಹಿಸಲಾಗಿದೆ. ತನಿಖೆ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣ ಸಂಬಂಧ ಸ್ಥಳೀಯ ಇನ್ಸ್ಪೆಕ್ಟರ್‌ನನ್ನು ಅಮಾನತು ಮಾಡಲಾಗಿದೆ. ತನಿಖೆ ವರದಿ ಬರಲಿ ಮುಂದೆ ನೋಡೋಣ ಎಂದರು.

ಎಸ್‌ಐಟಿ ತನಿಖೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ಅವರು, ಎಸ್‌ಐಟಿ, ಸಿಬಿಐ, ಸಿಒಡಿ ಎಲ್ಲಾ ಮಾಡಿ ಅಂತ ಹೇಳುತ್ತಾರೆ. ಅವರು ಹೇಳಿದ್ದೆಲ್ಲಾ ಮಾಡಿಕೊಂಡು ಕೂತರೇ ಆಡಳಿತ ನಡೆಸೋಕೆ ಆಗುತ್ತಾ? ಎಂದರು.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments