Monday, August 25, 2025
Google search engine
HomeUncategorizedಕಳಚಿತು ಮತ್ತೊಂದು ಕೊಂಡಿ.. ಗಾಂಧಿವಾದಿ ಪಾಂಗಾಳ ಗೋಪಾಲಕೃಷ್ಣ ನಾಯಕ್ ನಿಧನ

ಕಳಚಿತು ಮತ್ತೊಂದು ಕೊಂಡಿ.. ಗಾಂಧಿವಾದಿ ಪಾಂಗಾಳ ಗೋಪಾಲಕೃಷ್ಣ ನಾಯಕ್ ನಿಧನ

ಉಡುಪಿ : ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಕಟಪಾಡಿ ನಾಯಕ್ ಮನೆತನದ ಹಿರಿಯರಾದ, ಸ್ವಾತಂತ್ರ್ಯ ಹೋರಾಟಗಾರ ಪಾಂಗಾಳ ಗೋಪಾಲಕೃಷ್ಣ ನಾಯಕ್ (92 ) ನಿಧನರಾಗಿದ್ದಾರೆ.

ಕಟಪಾಡಿಯಲ್ಲಿ ಹೆಸರಾಂತ ನಾಯಕ್ ಆಯುರ್ವೇದಾಶ್ರಮ ಸಂಸ್ಥೆಯನ್ನು ನಡೆಸಿಕೊಂಡು ಬಂದಿದ್ದ ಇವರು ಗಾಂಧಿ ತತ್ವದಡಿ ಸರಳ ಜೀವನ ನಡೆಸುತ್ತಿದ್ದವರು. ಅವಿವಾಹಿತರಾಗಿದ್ದ ಇವರು ಸದಾ ಕಾಲ ಖಾದಿ ಬಟ್ಟೆ ಧರಿಸಿ. ದೇಶಿ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ಬಂದವರು.

ಪ್ರಾಣಿ ಪಕ್ಷಿಗಳ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಇವರು ಪರಿಸರ ಪ್ರೇಮಿಯಾಗಿ ಕಟಪಾಡಿ ಭಾಗದಲ್ಲಿ ಗಿಡಮರಗಳ ರಕ್ಷಣೆ ಮಾಡಿಕೊಂಡು ಬಂದವರು. ಆಯುರ್ವೇದ, ಶಾಸ್ತ್ರೀಯ ಸಂಗೀತದ ಬಗ್ಗೆ ಕೂಡಾ ಹೆಚ್ಚಿನ ಒಲವು ಹೊಂದಿದ್ದರು. ತಂದೆಯವರ ಜೊತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೂಡಾ ಇವರು ಗುರುತಿಸಿಕೊಂಡಿದ್ದರು. ಸಹೋದರ ಡಾ.ಪಾಂಗಾಳ ಸೀತಾರಾಮ ನಾಯಕ್ ಸೇರಿದಂತೆ ಇಬ್ಬರು ಸಹೋದರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸಂತಾಪ

ಗೋಪಾಲಕೃಷ್ಣ ನಾಯಕ್ ಅವರ ಸ್ವಇಚ್ಛೆಯಂತೆ ಪಾರ್ಥಿವ ಶರೀರವನ್ನು ಮಣಿಪಾಲ  ಕೆಎಂಸಿ ಆಸ್ಪತ್ರೆಗೆ ದಾನ ಮಾಡಲಾಯಿತು. ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಕುಟುಂಬದ ವರು ದೇಹವನ್ನು ಹಸ್ತಾಂತರಿಸಿದರು. ಇವರ ನಿಧನಕ್ಕೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಕಟಪಾಡಿ ಎಸ್​​ವಿಎಸ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ.ಡಿ.ಕಿಣಿ, ಸಂಚಾಲಕ ಕೆ. ಸತ್ಯೇಂದ್ರ ಪೈ, ಮಣಿಪಾಲ ರಂಗ ಪೈ, ಕಟಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರಭಾ ವಿ.ಶೆಟ್ಟಿ, ಎಸ್.ವಿ.ಎಸ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೇಮ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments