Site icon PowerTV

ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿಯಲ್ಲಿ 15ರಿಂದ20 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು : ನಗರದ ಕಮ್ಮನಹಳ್ಳಿ ಬಳಿಯ ಬಾಬು ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತವಾಗಿದ್ದು. ಭಾರೀ ಮಳೆಯ ಪರಿಣಾಮವಾಗಿ ಕಟ್ಟಡ ಕುಸಿದಿದೆ ಎಂದು ಕೆಲವರು ಶಂಕೆ ವ್ಯಕ್ತಪಡಿಸಿದ್ದರೆ,  ಮತ್ತೇ ಕೆಲವರು ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ .  ಕಟ್ಟಡದಲ್ಲಿ ಅನೇಕ ಕಾರ್ಮಿಕರು ಸಿಲುಕಿರುವ ಮಾಹಿತಿ ದೊರೆತಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತವಾಗಿದ್ದು, ಕಟ್ಟಡದ ಅವಶೇಷಗಳ ಅಡಿಯಲ್ಲಿ15 ರಿಂದ 20 ಕಾರ್ಮಿಕರು ಸಿಲುಕಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಪೋಲಿಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.

 

 

 

Exit mobile version