Monday, August 25, 2025
Google search engine
HomeUncategorizedಸಂಭಾಲಾ ಹಿಂಸಾಚಾರ: SP ಶಾಸಕ ಸೇರಿದಂತೆ 2500 ಜನರ ವಿರುದ್ಧ FIR ದಾಖಲು

ಸಂಭಾಲಾ ಹಿಂಸಾಚಾರ: SP ಶಾಸಕ ಸೇರಿದಂತೆ 2500 ಜನರ ವಿರುದ್ಧ FIR ದಾಖಲು

ಸಂಭಾಲ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಮೊಘಲರ ಕಾಲದ ಜಾಮಾ ಮಸೀದಿ ಸಮೀಕ್ಷೆ ವೇಳೆ ಭಾನುವಾರ ನಡೆದ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 4 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಮತ್ತು ಶಾಸಕ ನವಾಬ್ ಇಕ್ಬಾಲ್ ಮಹಮೂದ್ ಅವರ ಪುತ್ರ ನವಾಬ್ ಸುಹೇಲ್ ಇಕ್ಬಾಲ್ ಸೇರಿದಂತೆ 2,500 ಜನರ ವಿರುದ್ಧ ಪೊಲೀಸರು 7 ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸಮೀಕ್ಷೆಯನ್ನು ವಿರೋಧಿಸಿದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಕಲ್ಲು ತೂರಾಟ ನಡೆಸಿದ್ದು ನಂತರ ಘರ್ಷಣೆಯ ಘಟನೆಗಳು ನಡೆದಿದ್ದವು. ಹಿಂಸಾಚಾರದಲ್ಲಿ ಭಾಗಿಯಾಗಿರುವ ಜನರನ್ನು ಗುರುತಿಸಲು ಸಿಸಿಟಿವಿ ಮತ್ತು ಡ್ರೋನ್ ಕ್ಯಾಮೆರಾಗಳ ಸಹಾಯವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಂಭಾಲ್ ಎಸ್ಪಿ ಕೃಷ್ಣ ಕುಮಾರ್ ಬಿಷ್ಣೋಯ್ ಹೇಳಿದ್ದಾರೆ. ಈವರೆಗೆ 25 ಮಂದಿಯನ್ನು ಬಂಧಿಸಲಾಗಿದ್ದು, ಹಲವು ಮನೆಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಂಸದ ಜಿಯಾ-ಉರ್-ರೆಹಮಾನ್ ಬರ್ಕ್ ಹಿಂಸಾಚಾರವನ್ನು ಪೂರ್ವ ಯೋಜಿತ ಎಂದು ಆರೋಪಿಸಿದ್ದು ಮುಸ್ಲಿಮರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದರು. ಶಾಂತಿ ಕಾಪಾಡುವಂತೆ ಮನವಿ ಮಾಡಿ ನ್ಯಾಯ ಸಿಗುವ ಭರವಸೆ ವ್ಯಕ್ತಪಡಿಸಿದರು. ಹಿಂಸಾಚಾರದ ನಂತರ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದ್ದು ನವೆಂಬರ್ 30ರವರೆಗೆ ಹೊರಗಿನವರ ಪ್ರವೇಶವನ್ನು ನಿಷೇಧಿಸಿದೆ. ಯಾರಾದರೂ ಈ ರೀತಿ ಮಾಡಿರುವುದು ಕಂಡು ಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶಿಸಲಾಗಿದೆ.

ಹಿಂಸಾಚಾರದ ವೇಳೆ ಗುಂಪು ಗುಂಡಿನ ದಾಳಿ ನಡೆಸಿದೆ ಎಂದು ಪೊಲೀಸ್ ಆಡಳಿತ ತಿಳಿಸಿದೆ. ಘಟನೆಯ ನಂತರ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ. ಈ ಹಿಂಸಾಚಾರವು ಪೂರ್ವ ಯೋಜಿತ ಭಾಗವಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದರು. ಇದರಲ್ಲಿ 10-15 ಕಿಲೋಮೀಟರ್ ದೂರದ ಪ್ರದೇಶಗಳಿಂದ ಜನರನ್ನು ಕರೆಸಲಾಯಿತು. ಪೊಲೀಸರು ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಮತ್ತು ಹಿಂಸಾಚಾರದ ಹಿಂದಿನ ಮಾಸ್ಟರ್‌ಮೈಂಡ್‌ಗಾಗಿ ಹುಡುಕುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ ಎಂದು ಆಡಳಿತ ಮಂಡಳಿ ಹೇಳಿದ್ದರೂ ಉದ್ವಿಗ್ನ ವಾತಾವರಣ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments