Thursday, August 28, 2025
HomeUncategorizedಬಾಂಗ್ಲಾದ ಇಸ್ಕಾನ್​ ಮುಖ್ಯಸ್ಥರನ್ನು ಬಂಧಮುಕ್ತಗೊಳಿಸಬೇಕು : ಪೇಜಾವರ ಶ್ರೀ

ಬಾಂಗ್ಲಾದ ಇಸ್ಕಾನ್​ ಮುಖ್ಯಸ್ಥರನ್ನು ಬಂಧಮುಕ್ತಗೊಳಿಸಬೇಕು : ಪೇಜಾವರ ಶ್ರೀ

ಉಡುಪಿ: ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದುಆದಷ್ಟು ಬೇಗ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ರಾಜದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ.ಅವರ ಎಲ್ಲ ಸೌಲಭ್ಯಗಳನ್ನು ನಿಷೇಧಿಸಲಾಗಿದೆ.

ಇದು ಅತ್ಯಂತ ಕಠೋರವಾದ ವಿಚಾರ, ಇದನ್ನು ಖಂಡಿಸುತ್ತೇವೆ. ಬಹುಬೇಗ ಅವರನ್ನು ವಿಮುಕ್ತಗೊಳಿಸಬೇಕು. ಬಾಂಗ್ಲಾದೇಶಕ್ಕೆ ಅವರು ಮತ್ತು ಇಸ್ಕಾನ್ ಸಲ್ಲಿಸಿರುವ ಕೊಡುಗೆ ಅತ್ಯಪೂರ್ವ. ಹಸಿದವರಿಗೆ ಕಷ್ಟಕಾಲದಲ್ಲಿ ಅನ್ನ ಕೊಟ್ಟ ಸಂಸ್ಥೆ ಇಸ್ಕಾನ್. ಈ ಬಗ್ಗೆ ಬಾಂಗ್ಲಾದೇಶ ಅವರಿಗೆ ಕೃತಜ್ಞರಾಗಿರಬೇಕು. ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments