Site icon PowerTV

ಅಧಿವೇಶನ ಆರಂಭ : ಆಡಳಿತ ಪಕ್ಷವನ್ನು ಕಟ್ಟಿಹಾಕಲು ಇವೆ ಸಾಲು ಸಾಲು ಆರೋಪಗಳು !

ಬೆಳಗಾವಿ : ವಿಧಾನ ಸಭೆ ಚಳಿಗಾಲದ ಅಧಿವೇಶನ ಆರಂಭವಾಗಿದ್ದು. ಆಡಳಿತ ಪಕ್ಷ ಕಾಂಗ್ರೆಸ್​ನ್ನು ಕಟ್ಟಿಹಾಕಲು ವಿಪಕ್ಷಗಳು ತಯಾರಿ ನಡೆಸಿವೆ. ಯತ್ನಾಳ್ ಭಿನ್ನ ನಡೆ, ಅಂತರಿಕ ಜಗಳಗಳ ನಡುವೆಯು ಬಿಜೆಪಿ ಭರ್ಜರಿ ತಯಾರಿ ನಡೆಸಿದೆ ಎಂದು ಮಾಹಿತಿ ದೊರೆತಿದೆ.

ಸದನದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ ನಡೆಸಿ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜ್ಯ ಬಿಜೆಪಿ ತಯಾರಿ ನಡೆಸಿದ್ದು ಇದರ ನಡುವೆ ಬಿಜೆಪಿಯಲ್ಲಿನ ಒಳಜಗಳಗಳು ಇದಕ್ಕೆ ಅಡ್ಡಿ ಉಂಟು ಮಾಡುತ್ತವೆ ಎಂದು ಸಹ ವಿಮರ್ಶೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಆಗ್ರಹಿಸಿದ ಉದ್ದವ್​ ಠಾಕ್ರೆ ಮಗ !

ಇದಕ್ಕೆ ಪೂರಕವಾಗಿ ಯತ್ನಾಳ್​ ಆ್ಯಂಡ್​ ಟೀಮ್​ ಕೆಲವು ವಿಷಯಗಳ ಕುರಿತು ಪ್ರತ್ಯೇಕವಾಗಿ ಪ್ರಸ್ತಾಪಿಸಲು ಯೋಜನೆ ರೂಪಿಸಿದ್ದು. ಪಂಚಮ ಸಾಲಿ 2ಎ ಮೀಸಲಾತಿ ಕುರಿತು ಪ್ರತ್ಯೇಕ ಹೋರಾಟ ನಡೆಸಲು ಸಿದ್ದತೆ ನಡೆಸಿದೆ. ಇವೆಲ್ಲದರ ನಡುವೆಯು ಕೂಡ ವಿಪಕ್ಷಗಳಿಗೆ ಆಡಳಿತ ಪಕ್ಷವನ್ನು ಕಟ್ಟಿಹಾಕಲು ಸಾಕಷ್ಟು ವಿಷಯಗಳಿವೆ ಎಂಬುದನ್ನು ಮರೆಯುವಂತಿಲ್ಲ.

ವಿಪಕ್ಷಗಳ ಪ್ರಮುಖ ಅಸ್ತ್ರಗಳು ಯಾವುವೆಂದರೆ !

ಹೀಗೆ ಅನೇಕ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ಉಂಟುಮಾಡಲು ವಿಪಕ್ಷಗಳು ಸಿದ್ದತೆ ನಡೆಸಿವೆ.

 

Exit mobile version