Thursday, August 28, 2025
HomeUncategorizedಕೊಳ್ಳೇಗಾಲದ ಮಾಜಿ ಶಾಸಕ ಎಸ್​.ಜಯಣ್ಣರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಕೊಳ್ಳೇಗಾಲದ ಮಾಜಿ ಶಾಸಕ ಎಸ್​.ಜಯಣ್ಣರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಚಾಮರಾಜನಗರ : ಕೊಳ್ಳೆಗಾಲದ ಮಾಜಿ ಶಾಸಕ ಎಸ್​.ಜಯಣ್ಣ ನೆನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದು. ಅವರ ಅಂತಿಮ ದರ್ಶನವನ್ನು ಪಡೆದುಕೊಂಡ ಸಿಎಂ ಸಿದ್ದರಾಮಯ್ಯ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡರು.

ಕೊಳ್ಳೇಗಾಲ ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಸಿಎಂ ಸಿದ್ದರಾಮಯ್ಯ ‘ ಸುಮಾರು 11:50ರ ಸುಮಾರಿಗೆ ಜಯಣ್ಣರ ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡರು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ. ಜಯಣ್ಣರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ಸಮಾಜಕಲ್ಯಾಣ ಸಚಿವ ಹೆಚ್​ ಸಿ ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್,​ ಯತೀಂದ್ರ ಸಿದ್ದರಾಮಯ್ಯ, ಎ.ಆರ್​ ಕೃಷ್ಣಮೂರ್ತಿ, ಹೆಚ್​ ಎಂ ಗಣೇಶ ಪ್ರಸಾದ್​
ಜಿಲ್ಲಾಧಿಕಾರಿ ಶಿಲ್ಪಾನಾಗ್​ ಇತರ ಅಧಿಕಾರಿಗಳು ಭಾಗಿಯಾಗಿದ್ದರು.

ಜಯಣ್ಣರ ಕುರಿತು ಸಿಎಂ ಮಾತು !

ಅಂತಿಮ ದರ್ಶನ ಪಡೆದು ಮಾತನಾಡಿದ ಸಿದ್ದರಾಮಯ್ಯ ‘ ಜಯಣ್ಣ ಒಬ್ಬ ಪ್ರಾಮಾಣಿಕ, ಸರಳ ಸಜ್ಜನಿಕೆಯ ವ್ಯಕ್ತಿ, 1983ರಲ್ಲಿ ನನಗೆ ಪರಿಚಯವಾದರು. ಅಲ್ಲಿಂದನೂ ನನ್ನ ಜೊತೆ ಇದ್ದಾರೆ. ನಾನು ಪಕ್ಷ ಬದಲಾವಣೆ ಮಾಡಿದಾಗ ಅವರು ನನ್ನ ಜೊತೆ ಬಂದರು. ಆದರೆ ಅವರ ಪ್ರಾಮಾಣಿಕತೆಗೆ ಸರಿಯಾದ ಸ್ಥಾನಮಾನ ದೊರೆಯಲಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments