Site icon PowerTV

ಕೋಟೆಕಾರು ಬ್ಯಾಂಕ್​ ರಾಬರಿ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು !

ಮಂಗಳೂರು : ಜಿಲ್ಲೆಯ ಕೋಟೆಕಾರು ಬ್ಯಾಂಕ್ ದರೋಡೆಕೋರನೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಸ್ಥಳ ಮಹಜರು ವೇಳೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ 35 ವರ್ಷದ ಕಣ್ಣನ್​ ಮಣಿ ಎಂಬಾತನಿಗೆ ಗುಂಡೇಟು ನೀಡಿದ್ದಾರೆ.

ಜನವರಿ 17ರಂದು ಮಂಗಳೂರಿನ ಕೋಟೆಕಾರು ಬ್ಯಾಂಕ್​ ರಾಬರಿ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ತಮಿಳು ನಾಡಿನ ಮಧುರೈನಲ್ಲಿ ಬಂಧಿಸಿದ್ದರು. ಬಂಧಿತ ಆರೋಪಿಗಳಿಂದ ತಲ್ವಾರ್​, ಪಿಸ್ತೂಲ್​ಗಳನ್ನು ವಶ ಪಡಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ಕೋವಿಡ್​ ನಿರ್ವಹಣೆಯಲ್ಲಿ ವಿಫಲ : WHO ದಿಂದ ಹೊರ ಬಂದ ಅಮೇರಿಕಾ !

ಆದರೆ ಇಂದು ಪೊಲೀಸರು ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದು. ಈ ವೇಳೆ ಮುಂಬೈನ ಚೆಂಬೂರು ನಿವಾಸಿ ಕಣ್ಣನ್ ಮಣಿ (35) ಎಂಬಾತ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ನೀಡಿದ್ದು. ಉಳ್ಳಾಲ ಕೆಸಿ ರೋಡ್ ಬಳಿಯ ಅಲಂಕಾರಗುಡ್ಡೆ ಎಂಬಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ದೊರೆತಿದೆ.

Exit mobile version