Saturday, August 23, 2025
Google search engine
HomeUncategorizedಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾ*ವು !

ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾ*ವು !

ಬೆಳಗಾವಿ : ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು 15 ವರ್ಷದ ಗಣೇಶ್​ ಹೀರಾಮಣಿ ಸುತಾರ್​ ಎಂದು ಗುರುತಿಸಲಾಗಿದೆ.

ಮಂಗಳವಾರ ಶಾಲೆಗೆ ರಜೆಯಿದ್ದ ಕಾರಣ ಬಾಲಕ ಗಣೇಶ್​ ಕೆರೆಯಲ್ಲಿ ಈಜಾಡಲು ಹೋಗಿದ್ದ. ಆದರೆ ಹೊತ್ತು ಕಳೆದರು ಮಗ ಮನೆಗೆ ಬರದ ಹಿನ್ನಲೆ ಕುಟುಂಬಸ್ಥರು ಗಣೇಶನಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕರೆಯ ದಡದ ಬಳಿಯಲ್ಲಿ ಬಾಲಕನ ಬಟ್ಟೆ ಕಂಡು ಬಂದ ಹಿನ್ನಲೆ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿತ್ತು.

ಇದನ್ನೂ ಓದಿ: ಭೀಕರ ಅಗ್ನಿ ದುರಂತ : ಸಾ*ವಿನ ಸಂಖ್ಯೆ 76ಕ್ಕೆ ಏರಿಕೆ !

ಘಟನೆ ಬಗ್ಗೆ ಸ್ಥಳೀಯರು ಕೂಡಲೆ ವಡಗಾಂವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಾಲಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು.ಘಟನೆ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments