Wednesday, August 27, 2025
Google search engine
HomeUncategorizedಕೌಟುಂಬಿಕ ಕಲಹ : ಹೆಂಡತಿಯೆ ಕೊ*ಲೆ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿ ಕೆರೆಗೆ ಎಸೆದ ಪಾಪಿ ಪತಿ...

ಕೌಟುಂಬಿಕ ಕಲಹ : ಹೆಂಡತಿಯೆ ಕೊ*ಲೆ ಮಾಡಿ, ಕುಕ್ಕರ್​ನಲ್ಲಿ ಬೇಯಿಸಿ ಕೆರೆಗೆ ಎಸೆದ ಪಾಪಿ ಪತಿ !

ಹೈದರಾಬಾದ್: ಕೌಟುಂಬಿಕ ಕಲಹ ಹಿನ್ನೆಲೆ ಮಾಜಿ ಸೈನಿಕ ತನ್ನ ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿದ ನಂತರ ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಘಟನೆ ಹೈದರಾಬಾದ್‌ನ  ಮೀರಪೇಟೆಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೂಲದ ಗುರುಮೂರ್ತಿ ಎಂಬಾತ ತನ್ನ ಸ್ವಂತ ಹೆಂಡತಿಯನ್ನೆ ಕೊಲೆ ಮಾಡಿದ್ದಾನೆ. ಕೆಲ ಕಾಲ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದ ಗುರುಮೂರ್ತಿ ಪ್ರಸ್ತುತ ಕಾಂಚನ್‌ಬಾಗ್‌ನಲ್ಲಿ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಈ ಗುರುಮೂರ್ತಿ ಮೀರಪೇಟೆಯ ನ್ಯೂ ವೆಂಕಟೇಶ್ವರ ನಗರ ಕಾಲೋನಿಯಲ್ಲಿ ಪತ್ನಿ ವೆಂಕಟ ಮಾಧವಿ (35) ಮತ್ತು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ದಂಪತಿಗಳ ನಡವೆ ಕಳೆದ ಅನೇಕ ದಿನಗಳಿಂದ ಆಗಾಗಲೇ ಜಗಳ ನಡೆಯುತ್ತಿತ್ತು. ಈ ಹಿನ್ನಲೆ ಗುರುಮೂರ್ತಿ ತನ್ನ ಹೆಂಡತಿಯನ್ನು ಹತ್ಯೆಗೈದು ಬಳಿಕ ಆಕೆಯ ದೇಹವನ್ನು ತುಂಡಿತುಂಡಾಗಿ ಕತ್ತರಿಸಿ ಕುಕ್ಕರ್​ನಲ್ಲಿ ಬೇಯಸಿ ಕೆರೆಗೆ ಎಸೆದಿದ್ದಾನೆ.

ಇದನ್ನೂ ಓದಿ : ಗಣರಾಜ್ಯೋತ್ಸವದ ಪರೇಡ್​ನಲ್ಲಿ ರಾಷ್ಟ್ರದ ಗಮನ ಸೆಳೆಯಲಿದೆ ರಾಜ್ಯದ ಲಕ್ಕುಂಡಿ ಬ್ರಹ್ಮ ಜಿನಾಲಯ !

ಹತ್ಯೆಯ ಬಳಿಕ ಗುರುಮೂರ್ತಿ ತನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಎಂದು ಸಂಬಂಧಿಕರಿಗೆ ತಿಳಿಸಿದ್ದ. ಅಲ್ಲದೇ ಮೀರಪೇಟೆ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದಾನೆ. ದೂರು ದಾಖಲಿಸುವ ಸಲುವಾಗಿ ತನ್ನ ಅತ್ತೆ ಮಾವನೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಗುರುಮೂರ್ತಿ, ತನ್ನ ಹೆಂಡತಿ ಎಲ್ಲಿದ್ದಾಳೆಂದು ತಿಳಿದಿಲ್ಲ ಎಂಬಂತೆ ನಟಿಸಿದ್ದ. ಇಷ್ಟುಮಾತ್ರವಲ್ಲದೇ ಆಕೆಯನ್ನು ಹುಡುಕುವಲ್ಲಿ ಪೊಲೀಸರಿಗೆ ಬೆಂಬಲ ಕೂಡ ನೀಡಿದ್ದ.

ಆದರೆ ಪೊಲೀಸರು ಅನುಮಾನದ ಮೇಲೆ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭ ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾನೆ. ಮೀರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments