Wednesday, August 27, 2025
HomeUncategorizedಅಧರ್ಮದ ಜಗತ್ತನ್ನು ತೊರೆದು, ಸತ್ಯದ ಕಡೆ ಹೋಗುತ್ತಿದ್ದೇನೆ : ಪತ್ರ ಬರೆದಿಟ್ಟು ನಾಪತ್ತೆಯಾದ ವಿದ್ಯಾರ್ಥಿ !

ಅಧರ್ಮದ ಜಗತ್ತನ್ನು ತೊರೆದು, ಸತ್ಯದ ಕಡೆ ಹೋಗುತ್ತಿದ್ದೇನೆ : ಪತ್ರ ಬರೆದಿಟ್ಟು ನಾಪತ್ತೆಯಾದ ವಿದ್ಯಾರ್ಥಿ !

ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಪತ್ರವನ್ನು ಬರೆದು ವಿಧ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ಕಾಣೆಯಾಗಿರುವ ವಿದಾರ್ಥಿಯನ್ನು ಮೋಹಿತ್​ ಋಷಿ ಎಂದು ಗುರತಿಸಲಾಗಿದೆ.

ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ. ಆದರೆ ಜನವರಿ 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾನೆ. ಪುಸ್ತಕದಲ್ಲಿ ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ ಎಂದು  ಬರೆದಿದ್ದಾನೆ.

ಇದನ್ನೂ ಓದಿ : ಚೆಕ್​ಬೌನ್ಸ್​ ಪ್ರಕರಣ :ನಿರ್ದೇಶಕ ರಾಮ್​ಗೋಪಾಲ್​ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ !

ಮಗ ಕಾಣೆಯಾದ ಹಿನ್ನಲೆ ಪೋಷಕರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು. ಸದ್ಯ ಉತ್ತರಪ್ರದೇಶದ ಪ್ರಯಾಗ್​ ರಾಜ್​ನಲ್ಲಿ ಕುಂಭಮೇಳ ನಡೆಯುತ್ತಿರುವುದರಿಂದ ಮೋಹಿತ್​ ಪ್ರಯಾಗ್​ ಹೋಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೀಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು. ಬಾಲಕನನ್ನು ಹುಡುಕಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ.

ಜೊತೆಗೆ ವಿದ್ಯಾರ್ಥಿಯ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಬಾಲಕ ಪೋಟೊವನ್ನು ಹಾಕಿ ಮಾಹಿತ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments