Site icon PowerTV

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ? : ಅನುರಾಗ್‌ ಕಶ್ಯಪ್‌ ವಿವಾದಾತ್ಮಕ ಪೋಸ್ಟ್​

ಮುಂಬೈ: ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾವನ್ನು ಟೀಕಿಸುವ ಭರದಲ್ಲಿ ಬಾಲಿವುಡ್‌ ನಿರ್ದೇಶಕ ಅನುರಾಗ್ ಕಶ್ಯಪ್ (Anurag Kashyap) ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸಾವಿತ್ರಿಭಾಯಿ ಪುಲೆ ಜೀವಾಧಾರಿತ ಸಿನಿಮಾವನ್ನು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್‌ ಸರ್ಟಿಫಿಕೇಶನ್‌ಗೆ (CBFC) ಕಳುಹಿಸಲಾಗಿತ್ತು. ಪುಲೆ ಸಿನಿಮಾಗೆ ಯು ಸರ್ಟಿಫಿಕೇಟ್ ನೀಡಿತ್ತು. ಆದರೆ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಿರ್ದೇಶಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಅನುರಾಗ್‌ ಕಶ್ಯಪ್‌ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಕಶ್ಯಪ್‌ ಪೋಸ್ಟ್‌ನ ಸ್ಕ್ರೀನ್‌ ಶಾಟ್‌ ಅಪ್ಲೋಡ್‌ ಮಾಡಿ ಜನರು ಈಗ ಮುಂಬೈ ಪೊಲೀಸರಿಗೆ ದೂರು ನೀಡುತ್ತಿದ್ದಾರೆ.

Exit mobile version