ಮುಂಬೈ: ಭಾರತೀಯ ಕ್ರಿಕೆಟ್ ರಂಗಕ್ಕೆ ವಿರಾಟ್ ಕೊಹ್ಲಿ ನೀಡಿರುವ ಅಪಾರ ಕೊಡುಗೆಗಾಗಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದು.ಐಪಿಎಲ್ ವೀಕ್ಷಣಾ ವಿವರಣೆ ವೇಳೆ ಸುರೇಶ್ ರೈನಾ, ಕೊಹ್ಲಿಗೆ ಭಾರತ ರತ್ನ ನೀಡಬೇಕೆಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ದಿಗ್ಗಜ ಮತ್ತು ಆಧುನಿಕ ಚೇಸ್ ಮಾಸ್ಟರ್ ಎಂದೇ ಕರೆಯಲ್ಪಡುವ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಿಂಗ್ ಕೊಹ್ಲಿ ಅವರ ಈ ನಿರ್ಧಾರ ಅಭಿಮಾನಿಗಳಿಗೆ ಬೇಸರ ತಂದಿದೆ. ಇದರ ನಡುವೆ ಸುರೇಶ್ ರೈನಾ ಈ ರೀತಿಯಾಗಿ ಆಗ್ರಹಿಸಿದ್ದಾರೆ. ಇದನ್ನೂ ಓದಿ :‘ಆ ಟ್ರಂಪ್ ಬಡ್ಡೆತದು ಹೇಳ್ತು, ಅಂತ ಈ ಬಡ್ಡೆತದು ಕೇಳ್ತು’: ಮೋದಿ ವಿರುದ್ದ ಇಬ್ರಾಹಿಂ ವಾಗ್ದಾಳಿ
ಈ ಕುರಿತು ತಮ್ಮ ವೀಕ್ಷಕ ವಿವರಣೆ ವೇಳೆಯಲ್ಲಿ ಮಾತನಾಡಿದ ಅವರು “ಕೊಹ್ಲಿ ಅವರಿಗೆ ದೆಹಲಿಯಲ್ಲಿ ನಿವೃತ್ತಿ ಪಂದ್ಯವನ್ನು ನೀಡಬೇಕೆಂದು ನಾನು ಭಾವಿಸುತ್ತೇನೆ. ಅವರ ಕುಟುಂಬ ಮತ್ತು ತರಬೇತುದಾರರು ಅವರನ್ನು ಬೆಂಬಲಿಸಲು ಇರುತ್ತಿದ್ದರು. ದೇಶಕ್ಕಾಗಿ ಇಷ್ಟೆಲ್ಲಾ ಮಾಡಿದ ನಂತರ, ನೀವು ಅವರೊಂದಿಗೆ ಸಂವಹನ ನಡೆಸುತ್ತೀರಿ. ಏಕೆಂದರೆ ಅವರು ನಿವೃತ್ತಿ ಪಂದ್ಯಕ್ಕೆ ಅರ್ಹರು ಎಂದು ಬಿಸಿಸಿಐಗೆ ರೈನಾ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಅಮೆರಿಕಾದ ಆಸ್ಪತ್ರೆ ಮುಂಭಾಗ ಬಾಂಬ್ ಸ್ಪೋಟ: ಓರ್ವ ಸಾ*ವು, ನಾಲ್ವರಿಗೆ ಗಾಯ
ಇಲ್ಲಿಯವರೆಗೂ ಭಾರತ ರತ್ನ ಪ್ರಶಸ್ತಿ ಪಡೆದ ಆಟಗಾರರ ಕೀರ್ತಿಗೆ ಸಚಿನ್ ತೆಂಡೂಲ್ಕರ್ ಪಾತ್ರರಾಗಿದ್ದು. 2014ರಲ್ಲಿ ಅವರಿಗೆ ಈ ಪ್ರಶಸ್ತಿ ಲಭಿಸಿತ್ತು. ಇದೀಗ ವಿರಾಟ್ ಕೊಹ್ಲಿಗೂ ಈ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ.