ಬೆಂಗಳೂರು : ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರಿ ಅನಾಹುತಗಳು ಸಂಭವಿಸಿದ್ದು. ಮಳೆ ಹಾನಿ ಪ್ರದೇಶಕ್ಕೆ ಸಿಎಂ ಮತ್ತು ಡಿಸಿಎಂ ಭೇಟಿ ನೀಡಲು ಸಿದ್ದತೆ ನಡೆಸಲಾಗಿತ್ತು. ಆದರೆ ಮಳೆ ಹಿನ್ನಲೆ ಸಿಎಂ ಸಿಟಿ ರೌಂಡ್ಸ್ ಕ್ಯಾನ್ಸಲ್ ಮಾಡಲಾಗಿದೆ.
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದ್ದು. ಕಾಂಪೌಂಡ್ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇಷ್ಟಲ್ಲಾ ಅನಾಹತಗಳ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್ ಮಾಡಿ ಮಳೆ ಹಾನಿ ಪ್ರದೇಶಗಳನ್ನ ಪರಿಶೀಲಿಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಈ ಪ್ರವಾಸ ರದ್ದಾಗಿದೆ.
ಇದನ್ನೂ ಓದಿ :ಹೃದಯ ವಿದ್ರಾವಕ ಘಟನೆ: ಕಾರಿನಲ್ಲಿ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾ*ವು
ಮಧ್ಯಹ್ನಾದ ವೇಳೆಗೆ ಬೆಂಗಳೂರಿನಲ್ಲಿ ಮತ್ತೆ ಮಳೆ ಆರಂಭವಾಗಿದ್ದು. ಇದರಿಂದಾಗಿ ಸಿಎಂ ಸಿಟಿ ರೌಂಡ್ಸ್ ಕ್ಯಾನ್ಸಲ್ ಆಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಕಂಟ್ರೋಲ್ ರೂಂಗೆ ಭೇಟಿ ನೀಡಲಿದ್ದು. ಅಧಿಕಾರಿಗಳು ಜೊತೆ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ, ಡಿಸಿಎಂ ಡಿಕೆ.ಶಿವಕುಮಾರ್, ಸಚಿವ ಕೆ.ಜೆ ಜಾರ್ಜ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಾಥ್ ನೀಡಲಿದ್ದಾರೆ.