Saturday, August 23, 2025
Google search engine
HomeUncategorizedಭೀಕರ ಅಪಘಾತ: KSRTC ಬಸ್ ಉರುಳಿ ಬಿದ್ದು ಸಬ್​ ಇನ್ಸ್​ಪೆಕ್ಟರ್​ ಸಾ*ವು, ಹಲವರಿಗೆ ಗಾಯ

ಭೀಕರ ಅಪಘಾತ: KSRTC ಬಸ್ ಉರುಳಿ ಬಿದ್ದು ಸಬ್​ ಇನ್ಸ್​ಪೆಕ್ಟರ್​ ಸಾ*ವು, ಹಲವರಿಗೆ ಗಾಯ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್​ ಬೈಕ್​ಗಳಿಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿದ್ದು. ಪರಿಣಾಮ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿವೆ.

ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ಘಟನೆ ಅಪಘಾತ  ಸಂಭವಿಸಿದ್ದು. ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಎರಡು ಬೈಕ್​ಗಳಿಗೆ ಗುದ್ದಿ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್‌ಪೆಕ್ಟರ್ ನಾಗರಾಜು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ಭಾರೀ ಮಳೆಗೆ ರಾಜಧಾನಿ ತತ್ತರ: ಸಿಸಿಬಿ ಕಛೇರಿಗೆ ನೀರು ನುಗ್ಗಿ ಅವಾಂತರ, ಈಜೀಪುರದಲ್ಲಿ ಈಜಾಡೋ ಪರಿಸ್ಥಿತಿ

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments