ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಲಾಕ್ ಮಾಡಲಾದ ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ದುರಂತ ಸಂಭವಿಸಿದೆ.
ವಿಜಯನಗರ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಪೊಲೀಸರ ಪ್ರಕಾರ, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕಾರಿನ ಬಾಗಿಲುಗಳು ಲಾಕ್ ಆಗಿದ್ದರಿಂದ ಮಕ್ಕಳು ಒಳಗೆ ಸಿಲುಕಿಕೊಂಡಿದ್ದಾರೆ. ಬೆಳಿಗ್ಗೆಯಿಂದ ಮಕ್ಕಳು ಕಾಣದ ಕಾರಣ ಪೋಷಕರು ಹುಡುಕಾಟ ನಡೆಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು. ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ. ಇದನ್ನೂ ಓದಿ:ಕೊತ್ತೂರ್ಗೆ, ಸಂತೋಷ್ ಲಾಡ್ಗೆ ಜನ ಓಡಾಡಿಸ್ಕೊಂಡು ಹೊಡಿಬೇಕು: ರೇಣುಕಾಚಾರ್ಯ
Four Children Died of Suffocation after Car Door Locked, in #Dwarapudi, #Vizianagaram
Never leave children alone in a vehicle locked or unlocked, even for a minute, the interior temperature of a car can rise quickly, leading to heatstroke or #Suffocation
In a heart-wrenching… pic.twitter.com/5WYUunNjhT
— Surya Reddy (@jsuryareddy) May 19, 2025
ಭಾನುವಾರ (ಮೇ,18) ಬೆಳಿಗ್ಗೆ 8 ವರ್ಷದ ಉದಯ್, 8 ವರ್ಷದ ಚಾರುಮತಿ, 6 ವರ್ಷದ ಚರಿಷ್ಮಾ ಮತ್ತು 6 ವರ್ಷದ ಮನಸ್ವಿ ಆಟವಾಡಲು ಹೊರಗೆ ಹೋಗಿದ್ದರು. ಈ ವೇಳೆ ನಾಲ್ವರು ಅಲ್ಲೇ ನಿಲ್ಲಿಸಿದ್ದ ಕಾರಿನಲ್ಲಿ ಆಟವಾಡಲು ಒಳಗೆ ಹೋಗಿದ್ದಾರೆ. ಈ ವೇಳೆ ಕಾರಿನ ಬಾಗಿಲುಗಳು ಲಾಕ್ ಆಗಿದ್ದು ಮಕ್ಕಳು ಒಳಗೆ ಸಿಲುಕಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:ಕರ್ನಲ್ ಖುರೇಷಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವನ ವಿರುದ್ದ SIT ರಚನೆಗೆ ಸುಪ್ರೀಂ ಸೂಚನೆ
ಕಳೆದ ನಾಲ್ಕು ತಿಂಗಳಲ್ಲಿ ಆಂದ್ರದಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು. ಏಪ್ರೀಲ್ ತಿಂಗಳಲ್ಲಿ ಆಂದ್ರದ ರಂಗಾರೆಡ್ಡಿ ಜಿಲ್ಲೆಯಲ್ಲಿ ಕಾರಿನಲ್ಲಿ ಲಾಕ್ ಆಗಿ ಇಬ್ಬರು ಬಾಲಕಿಯರು ಉಸಿರುಕಟ್ಟಿ ಸಾವನ್ನಪ್ಪಿದ್ದರು.