ಬೆಳಗಾವಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮೂರು ವರ್ಷದ ಮಗು ಸಾವನ್ನಪ್ಪಿದ್ದು. ಮನೆಯ ಗೋಡೆ ಕುಸಿದು ಬಿದ್ದು ಕೀರ್ತಿಲಾ ನಾಗೇಶ್ ಪೂಜಾರಿ ಎಂಬ ಮಗು ಸಾವನ್ನಪ್ಪಿದೆ.
ಬೆಳಗಾವಿ ಜಿಲ್ಲೆಯ, ಗೋಕಾಕ್ ನಗರದ, ಮಹಲಿಂಗೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದ್ದು. ಮೂರು ವರ್ಷದ ಮಗು ಮತ್ತು ಆಕೆಯ ಅಕ್ಕ ರೂಮಿನಲ್ಲಿ ಮಲಗಿದ್ದರು. ಈ ವೇಳೆ ರಾತ್ರಿ ಇಡಿ ಸುರಿದ ಮಳೆಗೆ ಮನೆಯ ಗೋಡೆ ನೆನೆದು ಬೆಳಗಿನ ಜಾವ ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮೂರು ವರ್ಷದ ಕೀರ್ತಿಲಾ ನಾಗೇಶ್ ಪೂಜಾರಿ ಸಾವನ್ನಪ್ಪಿದ್ದು. ಆಕೆಯ 4 ವರ್ಷದ ಅಕ್ಕನಿಗೆ ಗಾಯವಾಗಿದೆ.
ಇದನ್ನೂ ಓದಿ :ಅಂಬೇಡ್ಕರ್ ಸತ್ತಾಗ 3 ಅಡಿ ಜಾಗ ಕೊಡಲಿಲ್ಲ, ಈಗ ಅಂಬೇಡ್ಕರ್ ಹುಲಿಗಳು ಅಂತ ಹೇಳ್ತಾರೆ: ಆರ್.ಅಶೋಕ್
ಪಕ್ಕದ ರೂಮಿನಲ್ಲಿ ಮಲಗಿದ್ದ ತಂದೆ-ತಾಯಿ ಅಪಾಯದಿಂದ ಪಾರಾಗಿದ್ದು. ಬಾಲಕಿ ಶವವನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಗೋಕಾಕ್ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.