Site icon PowerTV

ಹೃದಯಘಾತಕ್ಕೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಸಾ*ವು

ಹಾಸನ : ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಮೃತಪಟ್ಟ ವಿದ್ಯಾರ್ಥಿನಿಯನ್ನು 21 ವರ್ಷದ ಕವನ ಎಂದು ಗುರುತಿಸಲಾಗಿದೆ.

ಹಾಸನ ತಾಲ್ಲೂಕಿನ, ಕೆಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿ ಕವನ ಸಾವನ್ನಪ್ಪಿದ್ದಾಳೆ. ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿ ವ್ಯಾಸಾಂಗ ಮಾಡುತ್ತಿದ್ದ ಕವನ. ಮೂರು ಪರೀಕ್ಷೆಗಳನ್ನು ಬರೆದಿದ್ದಳು, ನಾಲ್ಕನೇ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಳು. ಇದನ್ನೂ ಓದಿ :ಪರೀಕ್ಷೆಯಲ್ಲಿ ಫೇಲ್​; ಓದುಲು ಇಷ್ಟವಿಲ್ಲ ಎಂದು ಕಾಲೇಜು ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ

ಆದರೆ ನಿನ್ನೆ ಸಂಜೆ ಮನೆಗೆ ನೀರು ತರುವ ವೇಳೆ ಕವನಗೆ ದಿಡೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತನ್ನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಯುವತಿ ಕುಸಿದು ಬಿದ್ದಿದ್ದು. ಪೋಷಕರು ಕೂಡಲೇ ಮಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಕವನ ಸಾವನ್ನಪ್ಪಿದ್ದು. ವೈದ್ಯರು ಯುವತಿ ಸಾವನ್ನಪ್ಪಿರುವುದನ್ನು ದೃಡಪಡಿಸಿದ್ದಾರೆ.

ಇದನ್ನೂ ಓದಿ :ಸಾವರ್ಕರ್​ ಬಗ್ಗೆ ಮಾತನಾಡಿದ ರಾಹುಲ್​ ಮುಖಕ್ಕೆ ಮಸಿ ಬಳಿಯುತ್ತೇವೆ; ಶಿವಸೇನಾ ನಾಯಕ

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು. ಸಹಪಾಠಿಗಳು ಮತ್ತು ಕಾಲೇಜು ಉಪನ್ಯಾಸಕ ವರ್ಗವು ಕವನ ಸಾವಿಗೆ ಕಂಬನಿ ಮಿಡಿದಿದ್ದಾರೆ.

Exit mobile version