Thursday, August 21, 2025
Google search engine
HomeUncategorizedಕಮಲ್​ ಬಳಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತೇವೆ, ಇಲ್ಲದಿದ್ದರೆ ಸಿನಿಮಾ ಬ್ಯಾನ್​; ನರಸಿಂಹಲು

ಕಮಲ್​ ಬಳಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡುತ್ತೇವೆ, ಇಲ್ಲದಿದ್ದರೆ ಸಿನಿಮಾ ಬ್ಯಾನ್​; ನರಸಿಂಹಲು

ಬೆಂಗಳೂರು: ತಮಿಳು ನಟ ಕಮಲ್​ ಹಾಸನ್​ ಕನ್ನಡ ಭಾಷೆಯ ವಿಚಾರವಾಗಿ ನೀಡಿರುವ ಉದ್ದಟತನದ ಹೇಳಿಕೆಗೆ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು. ಕಮಲ್​ ಸಿನಿಮಾಗಳನ್ನು ರಾಜ್ಯದಲ್ಲಿ ಬ್ಯಾನ್​ ಮಾಡುವಂತೆ ಕನ್ನಡ ಪರ ಸಂಘಟನೆಗಳು ಒತ್ತಡ ಹಾಕಿವೆ. ಇದರ ನಡುವೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ ಕಮಲ್​ ಕ್ಷಮೆ ಕೇಳಿಸುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು ಮಾತನಾಡಿ, ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳದೇ ಇದ್ರೆ ಖಂಡನೆ ಮಾಡ್ತೀವಿ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಅಂತ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿದ್ದ ಮಳೆ ನೀರು ಕಾರಿನ ಮೇಲೆ ಹಾರಿದಕ್ಕೆ ಹಲ್ಲೆ; ಕೈ ಬೆರಳು ಕಚ್ಚಿ ವಿಕೃತಿ

ಕಮಲ್​ ಹಾಸನ್​ ಸಿನಿಮಾದ ವಿತರಕ ವೆಂಕಟೇಶ್​ ಈ ಕುರಿತು ಮಾತನಾಡಿದ್ದು ” ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಏನು ಚರ್ಚೆ ಮಾಡಿದ್ದೀವಿ ಎಂಬುದನ್ನ ಕಮಲ್​ ಹಾಸನ್​ಗೆ ಕನ್ವೇ ಮಾಡುತ್ತೇವೆ. ಕಮಲ್​ ಹಾಸನ್​ ಹೇಳಿರುವ ಹೇಳಿಕೆಯನ್ನ ನಾವು ಕೂಡ ಖಂಡಿಸುತ್ತೇವೆ. ಕನ್ನಡ ಹಾಗೂ ಬ್ಯುಸಿನೆಸ್ ಎರಡೂ ನನಗೆ ಇಂಪಾರ್ಟೆಂಟ್. ಸಿನಿಮಾ ರಿಲೀಸ್ ಬಗ್ಗೆ ಥಿಯೇಟರ್ ಇನ್ನು ಫೈನಲ್ ಆಗಿಲ್ಲ
ಪ್ರೊಡಕ್ಷನ್ ಟೀಂ ಅವ್ರಿಗೆ ಹೇಳಿದೀವಿ ಅವ್ರ ಜೊತೆ ಮಾತಾಡ್ತಿವಿ ಎಂದು ವಿತರಕ ವೆಂಕಟೇಶ್​ ಹೇಳಿದರು. ಇದನ್ನೂ ಓದಿ: ತಮಿಳಿನಿಂದ ಕನ್ನಡ ಹುಟ್ಟಿದೆ ಅನ್ನೋದು ಸುಳ್ಳು; ಕಮಲ್ ಹಾಸನ್​ ವಿರುದ್ದ ಚೇತನ್​ ಅಹಿಂಸಾ ವಾಗ್ದಾಳಿ

ಇನ್ನೂ ಫಿಲ್ಮ್‌ ಚೇಂಬರ್‌ ಅಧ್ಯಕ್ಷ ನರಸಿಂಹಲು ಮಾತನಾಡಿ, ಕನ್ನಡ ರಕ್ಷಣಾ ವೇದಿಕೆಯವರು, ಹಲವಾರು ಸಂಘ ಸಂಸ್ಥೆಗಳು ಖಂಡಿಸಿದ್ದಾರೆ. ಸಿನಿಮಾ ಬ್ಯಾನ್ ಮಾಡ್ಬೇಕು ಅಂತಾ ಪಟ್ಟು ಹಿಡಿದಿದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳ್ಬೇಕು ಅಂತಾ ಒತ್ತಾಯಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ತಪ್ಪನ್ನ ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡ್ತೀವಿ ಅಂತ ಹೇಳಿದ್ದಾರೆ

ಕಮಲ್‌ ಹಾಸನ್‌ ಚಲನಚಿತ್ರಗಳನ್ನ ಬ್ಯಾನ್‌ಗೆ ಒತ್ತಾಯ ಹೆಚ್ಚಾದಂತೆ ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಸಭೆಯಲ್ಲಿ ಫಿಲ್ಮ್‌ ಚೇಂಬರ್‌ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ ಭಾಗಿ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದಾಗಲೇ ಕೆಲ ಕನ್ನಡಪರ ಹೋರಾಟಗಾರರು ಮುತ್ತಿಗೆಗೆ ಉತ್ನಿಸಿದ ಘಟನೆಯೂ ನಡೆಯಿತು. ಇದನ್ನೂ ಓದಿ: ಸನಾತನ ಧರ್ಮವೇ ಇಸ್ಲಾಂ ಧರ್ಮಕ್ಕೆ ಅಡಿಪಾಯ , ಮುಸ್ಲಿಂರು ರಾಮನ ವಂಶಸ್ಥರು; ಜಮಾಲ್​ ಸಿದ್ದಿಕಿ, ಬಿಜೆಪಿ ನಾಯಕ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments