Site icon PowerTV

ಕೌಟುಂಬಿಕ ಕಲಹ; ಅತ್ತಿಗೆಯನ್ನು ಕೊಂದು, ಆಕೆಯ ರುಂಡ ಹಿಡಿದು ಪೊಲೀಸರಿಗೆ ಶರಣಾದ ವ್ಯಕ್ತಿ

ಕೊಲ್ಕತ್ತಾ : ವ್ಯಕ್ತಿಯೋರ್ವ ತನ್ನ ಅತ್ತಿಗೆಯ ತಲೆಯನ್ನ ಕತ್ತರಿಸಿ, ತಲೆಯ ಸಮೇತ ಪೊಲೀಸ್​ ಠಾಣೆಗೆ ಬಂದು ಶರಣಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು. ಘಟನೆ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ:RCB ಫೈನಲ್​ ಪಂದ್ಯಕ್ಕೆ ರಜೆ ಘೋಷಿಸಲು ಸಿಎಂಗೆ ಮನವಿ; ವೈರಲ್​ ಆಯ್ತು ಪತ್ರ

ಪಶ್ಚಿಮ ಬಂಗಾಳದ ಬಸಂತಿ ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅತ್ತಿಗೆಯ ಕತ್ತರಿಸಿದ ತಲೆಯೊಂದಿಗೆ ವ್ಯಕ್ತಿ ನಡೆದುಕೊಂಡು ಹೋಗುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ಆ ವ್ಯಕ್ತಿ ಒಂದು ಕೈಯಲ್ಲಿ ಕತ್ತರಿಸಿದ ತಲೆ ಮತ್ತು ಇನ್ನೊಂದು ಕೈಯಲ್ಲಿ ಮಾರಕ ಆಯುಧದೊಂದಿಗೆ ಜನನಿಬಿಡ ರಸ್ತೆಯಲ್ಲಿ ನಡೆದುಕೊಂಡು ಹೋಗುವುದನ್ನು ಕಾಣಬಹುದು. ಪಕ್ಕದಲ್ಲಿದ್ದವರು ಮತ್ತು ಬೈಕ್ ಸವಾರರು ಆ ವ್ಯಕ್ತಿಯನ್ನು ನಿಲ್ಲಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಇದನ್ನೂ ಓದಿ:ಏಕದಿನ ಕ್ರಿಕೆಟ್​ಗೆ ಮ್ಯಾಕ್ಸ್​ವೆಲ್​ ದಿಢೀರ್​ ನಿವೃತ್ತಿ

ಆರೋಪಿಯನ್ನು ಬಿಮಲ್ ಮಂಡಲ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಇಂದು ಬೆಳಿಗ್ಗೆ ಬಿಮಲ್ ಮಂಡಲ್ ತನ್ನ ಅತ್ತಿಗೆಯ ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದರು. ಪೊಲೀಸರು ಅವರನ್ನು ಬಂಧಿಸಿದರು. ಕೌಟುಂಬಿಕ ಕಲಹದಿಂದಾಗಿ ಈ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಯಿಂದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯರ ಹೆಸರಲ್ಲೇ ರಾಮ ಇದ್ದಾನೆ, ನಮಗೂ ರಾಮನ ಮೇಲೆ ಭಕ್ತಿ ಇದೆ; ಲಕ್ಷ್ಮೀ ಹೆಬ್ಬಾಳ್ಕರ್​

ಪಶ್ಚಿಮ ಬಂಗಾಳದಲ್ಲಿಯೇ, ಫೆಬ್ರವರಿ 2024ರಲ್ಲಿ, ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ತನ್ನ ಹೆಂಡತಿಯ ಕತ್ತರಿಸಿದ ತಲೆಯನ್ನು ಹೊತ್ತುಕೊಂಡು ಹೋದ ಘಟನೆ ನಡೆದಿತ್ತು. ಆತ ಒಂದು ಕೈಯಲ್ಲಿ ಅವಳ ತಲೆ ಮತ್ತು ಇನ್ನೊಂದು ಕೈಯಲ್ಲಿ ಕುಡುಗೋಲು ಹಿಡಿದು ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ. ವಿವಾಹೇತರ ಸಂಬಂಧದ ಅನುಮಾನವೇ ಕೊಲೆಗೆ ಕಾರಣವಾಗಿತ್ತು. https://whatsapp.com/channel/0029Va5cjRY9Gv7Tls4bhb1n

Exit mobile version