Site icon PowerTV

ಪಾಕ್​ ಗುಪ್ತಚರ ಅಧಿಕಾರಿಗಳ ಜೊತೆ ಸೇನೆಯ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ದೇಶದ್ರೋಹಿ ಅರೆಸ್ಟ್

ಚಂಡೀಗಢ: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಸೈನಿಕರ ನಿಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಗಿರುವ ನಷ್ಟಕ್ಕಿಂತ, ಫಲಿತಾಂಶ ಮುಖ್ಯ; ಆಪರೇಷನ್​ ಸಿಂಧೂರ್​ ಬಗ್ಗೆ ಸಿಡಿಎಸ್​ ಅನಿಲ್​ ಚೌಹಾಣ್​ ಮಾತು

ಪಂಜಾಬ್​ನ ತರಣ್‌ನ ಮೊಹಲ್ಲಾ ನಿವಾಸಿ ಗಗನ್‌ದೀಪ್ ಸಿಂಗ್ ಅಲಿಯಾಸ್ ಗಗನ್ ಬಂಧಿತ ಆರೋಪಿ. ಈತ ಪಾಕಿಸ್ತಾನ ಮೂಲದ ಖಲಿಸ್ತಾನ್ ಪರ ನಾಯಕ ಗೋಪಾಲ್ ಸಿಂಗ್ ಚಾವ್ಲಾ ಸಂಪರ್ಕದಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ:ತಂದೆಯಾದ ಖುಷಿಯಲ್ಲಿದ್ದ ಫಿಲ್​ಸಾಲ್ಟ್​ ತಂಡಕ್ಕೆ ವಾಪಾಸ್​; ನಿಟ್ಟುಸಿರು ಬಿಟ್ಟ RCB ಫ್ಯಾನ್ಸ್​​

ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಆರೋಪಿ ಗಗನ್​ ಮಾಹಿತಿ ಹಂಚಿಕೊಂಡಿದ್ದು. ಆತನ ಮೊಬೈಲ್​ ಪೋನ್​ನ್ನು ವಶಕ್ಕೆ ಪಡೆದಿದ್ದಾರೆ. ಗಗನ್ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಲು ಪಿಐಒಗಳ ಜೊತೆ ಹಣ ಹಾಕಿಸಿಕೊಂಡಿದ್ದಾನೆ. ಆತನ ಮೊಬೈಲ್‌ನಲ್ಲಿ 20ಕ್ಕೂ ಹೆಚ್ಚು ಐಎಸ್‌ಐ ಸಂಪರ್ಕಗಳ ವಿವರಗಳು ಪತ್ತೆಯಾಗಿವೆ. ಈ ಸಂಬಂಧ ತರಣ್ ತರಣ್ ನಗರದ ಪೊಲೀಸ್ ಠಾಣೆಯಲ್ಲಿ ಅಧಿಕೃತ ರಹಸ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ‘ತಾಳ್ಮೆಯ ಫಲ ಸಿಹಿಯಾಗಿರುತ್ತೆ’ ; ಫೈನಲ್​ ಪಂದ್ಯಕ್ಕೂ ಮುನ್ನ RCBಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ

Exit mobile version