Thursday, August 21, 2025
Google search engine
HomeASTROLOGYRCB ಗೆಲುವಿಗೆ ರಾಜ್ಯಪಾಲರಿಂದ ಅಭಿನಂದನೆ; ಈ ಸಲ ಕಪ್​ ನಮ್ದು ಎಂದು ಸಿಎಂ ಸಿದ್ದರಾಮಯ್ಯ ಸಂತಸ

RCB ಗೆಲುವಿಗೆ ರಾಜ್ಯಪಾಲರಿಂದ ಅಭಿನಂದನೆ; ಈ ಸಲ ಕಪ್​ ನಮ್ದು ಎಂದು ಸಿಎಂ ಸಿದ್ದರಾಮಯ್ಯ ಸಂತಸ

ಇಂಡಿಯನ್​ ಪ್ರೀಮಿಯರ್​ ಲೀಗ್​ 2025ರ ಪಂದ್ಯವಳಿಯಲ್ಲಿ ಆರ್​ಸಿಬಿ ತಂಡ ಗೆದ್ದು ಬೀಗಿದ್ದು. ಆರ್​ಸಿಬಿ ಗೆಲುವಿಗೆ ಕರ್ನಾಟಕ ರಾಜ್ಯಪಾಲ ಥಾವರ್​ ಚಂದ್​ ಗೆಲ್ಲೋಟ ಟ್ವಿಟ್​ ಮಾಡಿ ಅಭಿನಂದನೆ ಸಲ್ಲಿಸಿದ್ದು. ಆರ್​​ಸಿಬಿಯ ಯಶಸ್ಸು ಮುಂದುವರಿಯಲಿ ಎಂದು ಹಾರೈಸಿದ್ದಾರೆ.

17 ವರ್ಷಗಳ ವನವಾಸ ಅಂತ್ಯವಾಗಿದ್ದು. ಕೊನೆಗೂ ಆರ್​ಸಿಬಿ ತಂಡ ಪ್ರಶಸ್ತಿಗೆ ಮುತ್ತಿಟ್ಟಿದೆ. ಆರ್​ಸಿಬಿ ಗೆಲುವುಗೆ ಅಭಿಮಾನಿಗಳ ಸಂಭ್ರಮಚರಣೆ ಮುಗಿಲು ಮುಟ್ಟಿದ್ದು. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ವಿಶೇಷ ಪೋಸ್ಟ್​ವೊಂದನ್ನು ಹಾಕಿ ಅಭಿನಂದನೆ ತಿಳಿಸಿದ್ದಾರೆ. “ಐಪಿಎಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆರ್​ಸಿಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಧೈರ್ಯ ಮತ್ತು ಉತ್ಸಾಹವನ್ನು ಪ್ರದರ್ಶಿಸುವ ಮೂಲಕ ಗಮನಾರ್ಹ ಗೆಲುವಿನ ನಗೆ ಬೀರಿದೆ. ಮುಂದಿನ ಪ್ರಯಾಣದಲ್ಲಿ ಆರ್‌ಸಿಬಿ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ. ಇದನ್ನೂ ಓದಿ :RCB ಗೆಲುವನ್ನು ಸಂಭ್ರಮಿಸುತ್ತಿದ್ದ ಯುವಕನಿಗೆ ಚಾಕು ಇರಿದ ದುಷ್ಕರ್ಮಿ

RCB ತಂಡಕ್ಕೆCM ಶುಭ ಹಾರೈಕೆ..!

ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಸಿಎಂ ಸಿದ್ದರಾಮಯ್ಯ ಆರ್​ಸಿಬಿ ಗೆಲುವಿಗೆ ಶುಭಾಷಯ ತಿಳಿಸಿದ್ದು. “ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್​ ಮುಡಿಗೇರಿಸಿಕೊಂಡಿರುವ ಆರ್​ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಆರ್​ಸಿಬಿಯಿಂದ ಸಂಘಟಿತ ಪ್ರದರ್ಶನವಿದೆ. ಇದನ್ನೂ ಓದಿ :ಇಂದು ಸಂಜೆ ಬೆಂಗಳೂರಿನಲ್ಲಿ RCB ವಿಜಯಯಾತ್ರೆ; ಅಭಿಮಾನಿಗಳಲ್ಲಿ ಸಂತಸ

ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ. ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಸಿಎಂ ಅಭಿನಂದನೆ ತಿಳಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments