ಒತ್ತಡ ಹೇರಿ ಕಾರ್ಯಕ್ರಮ ಆಯೋಜನೆ; ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ್​ ರಾಜು ತಲೆದಂಡ

ಬೆಂಗಳೂರು: ಕಾಲ್ತುಳಿತ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಎಲ್​ಸಿ ಗೋವಿಂದ್​ ರಾಜುರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದು. ವಿಧಾನಸೌದ ಮುಂಭಾಗ ತರಾತುರಿಯಲ್ಲಿ ಕಾರ್ಯಕ್ರಮ ಮಾಡುವುದರಿಂದ ಹಿಂದೆ ಗೋವಿಂದ್​ರಾಜು ಪಾತ್ರವಿತ್ತು ಎಂದು ತಿಳಿದು ಬಂದಿದೆ.

ಹಾಲಿ ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು , ತರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜುಗೆ ಗೇಟ್ ಪಾಸ್ ನೀಡಲಾಗಿದೆ. ಇದನ್ನೂ ಓದಿ :ಪೊಲೀಸ್ ಅಧಿಕಾರಿಗಳ ತಲೆದಂಡ; ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್​ ಎತ್ತಂಗಡಿ

ಅಷ್ಟೇ ಅಲ್ಲದೇ ಇಂದು (ಜೂ.06) ಬೆಳಿಗ್ಗೆ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಗೋವಿಂದ್​ ರಾಜು ವಿರುದ್ದ ಗಂಭೀರ ಆರೋಪ ಮಾಡಿದ್ದರು. ಗೋವಿಂದ್​ ರಾಜುರವರ ಸಲಹೆ ಮೇರೆಗೆ ಕಾರ್ಯಕ್ರಮ ಆಯೋಜನೆಗೆ ಸಿಎಂ ಆದೇಶ ಮಾಡಿದ್ದರು ಎಂದು ಆರೋಪಿಸಿದ್ದರು.

ಜೊತೆಗೆ ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ, ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ ಎಂದು ಮಾಹಿತಿ ದೊರೆತಿದೆ. ಇದನ್ನೂ ಓದಿ:ಪೊಲೀಸ್​ ಕಮಿಷನರ್​ ದಯಾನಂದ ಅಮಾನತು; ಸರ್ಕಾರದ ವಿರುದ್ದ ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

RELATED ARTICLES

Related Articles

TRENDING ARTICLES