ಮಂಡ್ಯ: ಪೊಲೀಸ್ ಕಮಿಷನರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು. ಇದನ್ನು ಖಂಡಿಸಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು ಎಂಬುವವರು ರಾಜ್ಯ ಸರ್ಕಾರದ ನಿರ್ಧಾರವನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದು. ರಾಜ್ಯಪಾಲರಿಗೆ ಸರ್ಕಾರದ ನಡೆ ಖಂಡಿಸಿ ದೂರು ನೀಡಲು ತೆರಳಿದ್ದರು. ಈ ವೇಳೆ ಕಾನ್ಸ್ಟೇಬಲ್ ನರಸಿಂಹರಾಜು ಕೈಗೆ ಕಪ್ಪುಪಟ್ಟಿ ಧರಿಸಿ, ಅಂಬೇಡ್ಕರ್ ಪೋಟೊ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ :‘ಟ್ರಂಪ್ ಚುನಾವಣೆ ಗೆದ್ದಿದ್ದೇ ನನ್ನಿಂದ’; ಟ್ರಂಪ್ ವಿರುದ್ದ ತಿರುಗಿ ಬಿದ್ದ ಎಲಾನ್ ಮಸ್ಕ್..!
ದೂರಿನಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದು ಪಡಿಸಬೇಕು. ಈ ಮೂಲಕ ಪೊಲೀಸ್ ಇಲಾಖೆಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಬರೆದಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಇವರನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ :ಪೊಲೀಸ್ ಅಧಿಕಾರಿಗಳ ತಲೆದಂಡ; ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ