Site icon PowerTV

ಹುಡುಗಿಗಾಗಿ ಹಾಲಿ ಲವ್ವರ್-ಮಾಜಿ ಲವ್ವರ್​ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಹೆಣ್ಣು, ಹೊನ್ನು, ಮಣ್ಣಿಗೆ ಪ್ರಪಂಚದಲ್ಲಿ ಮಹಾನ್ ಯುದ್ಧಗಳೆ ನಡೆದುಹೋಗಿದೆ. ಈಗಿರುವಾಗ ಕೊಲೆಗಳು ಯಾವ ಲೆಕ್ಕ. ಇಲ್ಲೊಬ್ಬ ಯುವಕ ತಾನು ಪ್ರೀತಿ ಮಾಡ್ತಿದ್ದ ಯುವತಿಯನ್ನ, ಮತ್ತೊಬ್ಬ ಯುವಕ ಪ್ರೀತಿಸಿದ್ದ ಅನ್ನೋ ಕಾರಣಕ್ಕಾಗಿ ಪಾರ್ಟಿ ಮಾಡೋ ನೆಪದಲ್ಲಿ ಫಾರ್ಮ್​ಹೌಸ್​​ಗೆ ಕರೆದು ಮನೋಸೋ ಇಚ್ಚೆ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ :ನಟ ಕಾಡ ನಟರಾಜ್ ಅಭಿನಯದ ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ

ದೊಡ್ಡಬಳ್ಳಾಪುರದ, ರೈಲ್ವೇ ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು. ವೇಣುಗೋಪಲ್​ ಎಂಬಾತ ದರ್ಶನ್​ ಎಂಬ ಯುವಕನನ್ನು ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ. ವೇಣುಗೋಪಾಲ್​ ಪ್ರೀತಿಸುತ್ತಿದ್ದ ಯುವತಿಯನ್ನ, ದರ್ಶನ್​ ಕೂಡ ಪ್ರೀತಿಸುತ್ತಿದ್ದ. ಆಕೆ ವೇಣುಗೋಪಾಲ್​ನನ್ನು ಬಿಟ್ಟು, ದರ್ಶನ್​ನನ್ನ ಪ್ರೀತಿಸುತ್ತಿದ್ದಳು. ಇದರಿಂದ ಕೋಪಗೊಂಡಿದ್ದ ವೇಣುಗೋಪಾಲ್​ ದರ್ಶನ್​ ಕೊಲೆ ಮಾಡಲು ಸಂಚು ರೂಪಿಸಿದ್ದನು.

ಇದೇ ಕಾರಣಕ್ಕೆ ಪಾರ್ಟಿ ಮಾಡೋ ನೆಪದಲ್ಲಿ ರಾತ್ರಿ 9.30ರ ಸುಮಾರಿಗೆ ಯುವತಿಯ ಮಾಜಿ ಲವ್ವರ್ ವೇಣುಗೋಪಾಲ್​ ಹಾಲಿ ಲವ್ವರ್​ ದರ್ಶನ್​​ರನ್ನು ತೋಟದ ಮನೆಗೆ ಕರೆಸಿದ್ದನು. ಈ ವೇಳೆ ಮಾತಿಗೆ ಮಾತು ಬೆಳೆದು ವೇಣು ಗೋಪಾಲ್​, ಹಾಲಿ ಲವ್ವರ್​ ದರ್ಶನ್​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆ ಮಾಡ್ತಿದ್ದಂತೆ ಮಾಜಿ ಪ್ರಿಯತಮ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ :ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

ಸದ್ಯ ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಿಎನ್​ಎಸ್ 103 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುಂದುವರೆದು ಪೊಲೀಸರು ತಂಡ ರಚನೆ ಮಾಡಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

Exit mobile version