ಮೈಸೂರು : ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಲ್ಲಿ ನಡೆದಿದೆ. ಓಂ ಪ್ರಕಾಶ್, ಅವರ ತಂದೆ- ತಾಯಿ, ಗರ್ಭಿಣಿ ಹೆಂಡತಿ ಹಾಗೂ ನಾಲ್ಕು ವರ್ಷದ ಮಗು ಮೃತ ದುರ್ದೈವಿಗಳು.
ಓಂ ಪ್ರಕಾಶ್ ಅನಿಮೇಷನ್ ಸಿನಿಮಾ ಮಾಡ್ಬೇಕು ಅಂತ ಕನಸು ಕಂಡಿದ್ದರು. ತಮಿಳಿನ ಅನಿಮೇಷನ್ ಸಿನಿಮಾ ‘ಕೊಚ್ಚಾಡಿಯನ್’ ರೀತಿಯಲ್ಲಿ ಕನ್ನಡದಲ್ಲಿ ಒಂದು ಸಿನಿಮಾ ಮಾಡಲು ತಯಾರಿ ನಡೆಸಿದ್ದರು. ಸಿನಿಮಾಕ್ಕಾಗಿ 60 ಲಕ್ಷ ರೂ ಬಂಡವಾಳವನ್ನು ಹಾಕಿದ್ದರು. ಆದರೆ, ಕಲಾವಿದರು, ತಂತ್ರಜ್ಞರು ಕೈ ಕೊಟ್ಟಿದ್ದರಿಂದ ಸಿನಿಮಾ ಅರ್ಧಕ್ಕೇ ನಿಂತು ಹೋಯ್ತು. ಒಂದು ಕಡೆ ಸಿನಿಮಾ ನಿಂತೋದ ನೋವು, ಇನ್ನೊಂದ್ ಕಡೆ ಸಾಲಗಾರರ ಕಾಟ ಸಹಿಸಿಕೊಳ್ಳಲಾಗದೆ ಓಂ ಪ್ರಕಾಶ್ ಗರ್ಭಿಣಿ ಹೆಂಡತಿ, ನಾಲ್ಕು ವರ್ಷದ ಮಗ, ತಂದೆ ಹಾಗೂ ತಾಯಿಗೆ ಶೂಟ್ ಮಾಡಿ ತಾನೂ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ಒಂದೇ ಕುಟುಂಬದ ಐವರು ಆತ್ಮಹತ್ಯೆ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


