Saturday, August 23, 2025
Google search engine
HomeUncategorizedಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ : ಅಭ್ಯರ್ಥಿಗಳಿಗೆ ಚಾಟಿ ಬೀಸಿದ ಕುಮಾರಸ್ವಾಮಿ

ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ : ಅಭ್ಯರ್ಥಿಗಳಿಗೆ ಚಾಟಿ ಬೀಸಿದ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕೆಲವು ಜೆಡಿಎಸ್ ಅಭ್ಯರ್ಥಿಗಳಿಗೆ ಚಾಟಿ ಬೀಸಿದ್ದಾರೆ.

ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಆನ್ಲೈನ್ ಸಭೆ ನಡೆಸಿದ ಅವರು, ಅಭ್ಯರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಚುನಾವಣೆ ಸಿದ್ಧತೆಯ ಭಾಗವಾಗಿ ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಿಪ್ಸ್ ನೀಡಿದ್ದಾರೆ.

ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಸಭೆ ನಡೆಸಿದ್ದು, ಕೆಲ ಅಭ್ಯರ್ಥಿಗಳಿಗೆ ಚಾಟಿ ಬೀಸಿದರು. ಅಲ್ಲದೆ, ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು ಹಾಗೂ ಗೆಲುವಿನ ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಪಕ್ಷದ ಕಚೇರಿಯಿಂದ ಬರುವ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಿದ್ದಾರೆ. ಮತದಾನಕ್ಕೆ ಇನ್ನೂ 37 ದಿನ ಇದೇ, ಇದು ನಿಮಗೆಲ್ಲ ಅಗ್ನಿಪರೀಕ್ಷೆ. ಕ್ಷೇತ್ರದಲ್ಲಿ ಏನಾದರೂ ಸಮಸ್ಯೆ ಇದ್ದರೆ ಬಗೆಹರಿಸಿಕೊಳ್ಳಿ. ಕಾರ್ಯಕರ್ತರು, ಮುಖಂಡರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಎಂದು ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.

ಪಂಚರತ್ನ ರಥಯಾತ್ರೆ ಯಶಸ್ವಿ ಆಗಿದೆ. ಮೈಸೂರಿನಲ್ಲಿ ಸಮಾರೋಪ ಸಮಾವೇಶ ಕೂಡ ಯಶಸ್ವಿ ಆಗಿದೆ. ಪಂಚರತ್ನ ಯೋಜನೆಗಳನ್ನು ಮನೆ ಮನೆಗೂ ತೆಗೆದುಕೊಂಡು ಹೋಗಿ. ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments