Saturday, August 23, 2025
Google search engine
HomeUncategorizedಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ : ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ಕಿಡಿ

ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ : ನಾರಾಯಣಗೌಡ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು : ಒಬ್ಬರನ್ನು ತುಳಿಯಲು ಇನ್ನೊಬ್ಬರನ್ನು ಬೆಳೆಸುತ್ತಾರೆ ಎಂದು ತಮ್ಮ ಬಗ್ಗೆ ಕೀಳಾಗಿ ಹೇಳಿಕೆ ನೀಡಿರುವ ಸಚಿವ ನಾರಾಯಣಗೌಡ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾರಾಯಣಗೌಡರನ್ನು ಬೆಳೆಸೋಕೆ ನನ್ನ ಪಕ್ಷವನ್ನು ಹಾಳು ಮಾಡಿಕೊಳ್ಳಬೇಕಾ? ಎಂದು ಹರಿಹಾಯ್ದಿದ್ದಾರೆ.

ಇವರು ಮಹಾನ್ ಕೆಲಸ ಮಾಡಿದ್ದಾರೆ ಅಂತ ಹೇಳಿ ನಾನು ಅಭ್ಯರ್ಥಿ ಹಾಕದೇ‌ ಇರಲಾ? ಕೃಷ್ಣ ವಿರುದ್ದ ಅಭ್ಯರ್ಥಿ ಆಗಬೇಕು ಅಂತ ಬಂದಾಗ ಅವತ್ತು ಈ ಪರಿಜ್ಞಾನ ಇರಲಿಲ್ಲವಾ ಇವರಿಗೆ? ಕೃಷ್ಣ ವಿರುದ್ದ ಅಭ್ಯರ್ಥಿ ಆಗೋಕೆ ಯಾಕೆ ಬಂದರು ಇವರು ಎಂದು ವಾಗ್ದಾಳಿ ನಡೆಸಿದ್ದಾರೆ.

ಟಿಕೆಟ್ ಕೊಡಿಸಿದ್ದು ನಾನು

ಎರಡನೇ ಬಾರಿ ನಿನಗೆ ಟಿಕೆಟ್ ಕೊಡಬಾರದು ಅಂತ ಇದ್ದಿದ್ದು. ಆದರೂ ಟಿಕೆಟ್ ಕೊಟ್ಟೆವು. ಟಿಕೆಟ್ ಕೊಡಿಸಿದ್ದು ನಾನು. ಕುತ್ತಿಗೆ ಕೊಯ್ದು ಹೋದವನು ಈ ವ್ಯಕ್ತಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನಿಂದ ನಾವು ಪಾಠ ಕಲಿಯಬೇಕಿಲ್ಲ. ನಾವು ಯಾವ ರೀತಿ ನಡೆದುಕೊಳ್ಳಬೇಕು ಅಂತ ನಮಗೆ ಗೊತ್ತಿದೆ. ನಿನ್ನ ಕಾಲ ಮುಗಿದಿದೆ ಎಂದು ನಾರಾಯಣಗೌಡ ವಿರುದ್ಧ ಕಿಡಿಕಾರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments