Monday, August 25, 2025
Google search engine
HomeUncategorizedಸಿದ್ದಗಂಗಾ ಮಠಕ್ಕೆ ಬಂದರೆ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ : ಸಚಿವ ಈಶ್ವರ್ ಖಂಡ್ರೆ

ಸಿದ್ದಗಂಗಾ ಮಠಕ್ಕೆ ಬಂದರೆ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ : ಸಚಿವ ಈಶ್ವರ್ ಖಂಡ್ರೆ

ತುಮಕೂರು : ಅನ್ನ, ಜ್ಞಾನ, ಅಕ್ಷರ ದಾಸೋಹದ ತಾಣವಾದ ಸಿದ್ದಗಂಗಾ ಮಠಕ್ಕೆ ಆಗಮಿಸಿದಾಗ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರಿಗಳ ಗದ್ದುಗೆಯ ದರ್ಶನ ಪಡೆದು, ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪೂಜ್ಯರ ಪ್ರೇರಣೆ ಪಡೆದು, ಸರ್ವರಿಗೂ ಲೇಸನ್ನೇ ಬಯಸುವ ಬಸವಾದಿ ಪ್ರಮಥರ ಹಿತವಚನದಂತೆ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಪರಿವರ್ತಿಸಲಾಗುವುದು. ರಾಜ್ಯವನ್ನು ಪ್ರಗತಿಪಥದಲ್ಲಿ ಕೊಂಡೊಯ್ಯುವ ಕಾರ್ಯ ಮಾಡಲಾಗುವುದು ಎಂದು ನುಡಿದಿದ್ದಾರೆ.

ಅರಣ್ಯ ಒತ್ತುವರಿದಾರರ ವಿರುದ್ಧ ಕ್ರಮ‌

ಅರಣ್ಯ ಪ್ರದೇಶದಲ್ಲಿನ ಸಣ್ಣ ಹಿಡುವಳಿದಾರರನ್ನು ಒಕ್ಕಲಿಬ್ಬಿಸದೆ ಅರಣ್ಯ ಭೂಮಿ ಸಂರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಂದಾಯ ಇಲಾಖೆ ಅರಣ್ಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಿದ ಬಳಿಕ ಈ ಸಮಸ್ಯೆಗೆ ಪರಿಹಾರ ದೊರಕಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಸಿಎಂ ಆದ ತಕ್ಷಣ ಅರ್ಬನ್ ನಕ್ಷಲರೆಲ್ಲರೂ ಬಿಲದಿಂದ ಹೊರಗೆ ಬಂದಿದ್ದಾರೆ : ಸಿ.ಟಿ. ರವಿ

ಗ್ಯಾರಂಟಿಗಳ ಅನುಷ್ಠಾನ ಗ್ಯಾರಂಟಿ

ಉಸಿರಾಡುವ ಗಾಳಿ ಕುಡಿಯುವ ನೀರು ಕಲುಷಿತವಾದರೆ ವಿಷವಾದರೆ ಬದುಕುವುದು ಹೇಗೆ? ತಮಗೆ ದೊರೆತಿರುವ ಈ ಖಾತೆಯಲ್ಲಿ ದಕ್ಷ ಪ್ರಾಮಾಣಿಕವಾಗಿ ಕೆಲಸ ಮಾಡಿ ಮುಂದಿನ ಪೀಳಿಗೆ ಸ್ಮರಿಸುವಂತಹ ಕಾರ್ಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಗ್ಯಾರಂಟಿಗಳ ಅನುಷ್ಠಾನ ಗ್ಯಾರಂಟಿ ಆಗಲಿದೆ. ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಒಪ್ಪಿಗೆ ಸೂಚಿಸಲಾಗಿದ್ದು, ಈ ಬಗ್ಗೆ ರೂಪು ರೇಶೆ ತಯಾರಿಸಲಾಗುತ್ತಿದೆ ಶೀಘ್ರವೇ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದು ಮಾದರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments