Sunday, August 24, 2025
Google search engine
HomeUncategorizedಆನೆ ದಾಳಿ : ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ...

ಆನೆ ದಾಳಿ : ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಮೃತರಾದ ವೀರಭದ್ರ ಮತ್ತು  ರವಿಯವರ ಕುಟುಂಬಕ್ಕೆ ನಿಯಮಾನುಸಾರ 15 ಲಕ್ಷ ರೂ. ಪರಿಹಾರವನ್ನು ಒದಗಿಸಲಾಗುವುದು. ಯಾವುದೇ ಪರಿಹಾರ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ, ಅವರ ಕುಟುಂಬಕ್ಕೆ ಆಸರೆ, ಆಧಾರವಾಗುತ್ತದೆ ಎಂದು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಕಾಡುಪ್ರಾಣಿಗಳ ದಾಳಿಯಿಂದ ಸಾವಿಗೀಡಾಗಬಾರದು. ಇನ್ನು ಮುಂದೆ ಪ್ರಾಣಿಗಳ ಮತ್ತು ಮಾನವನ ಸಂಘರ್ಷದಿಂದ ಹೆಚ್ಚಿನ ಜೀವ ಹಾನಿ ಆಗದ ರೀತಿಯಲ್ಲಿ ಕ್ರಮ ವಹಿಸಲು ಮತ್ತು ನಾಡಿಗೆ ದಾಳಿ ಇಟ್ಟಿರುವ ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾರು ಅಪಘಾತ : ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ

ಬಜೆಟ್ ನಲ್ಲಿ ಹೆಚ್ಚು ಅನುದಾನಕ್ಕೆ ಮನವಿ

ತಕ್ಷಣವೇ ಎಲ್ಲಿ ಹೆಚ್ಚಿನ ಆನೆಗಳ ದಾಳಿ ಪ್ರದೇಶವಿದೆಯೋ ಅಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಬೇಕು. ಇಂತಹ ಅನಾಹುತಗಳನ್ನು ತಪ್ಪಿಸುವುದು ಅಗತ್ಯವಾಗಿದೆ. ಇದಕ್ಕೆ ಮುಂಬರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಆನೆ ದಾಳಿಗೆ ಇಬ್ಬರು ಸಾವು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ವಿರೂಪಾಕ್ಷ ಪುರ ಹೋಬಳಿ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರ (40) ಹಾಗೂ ಮೊನ್ನೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಮಳೆಯೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ರೈತ ರವಿ (40) ಎಂಬುವರು ಆನೆ ದಾಳಿಯಿಂದ ಮೃತಪಟ್ಟಿದ್ದಾರೆ.

ಸಚಿವ ಈಶ್ವರ ಖಂಡ್ರೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಮೃತರಿಬ್ಬರ ಕುಟುಂಬಕ್ಕೆ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments