Sunday, August 24, 2025
Google search engine
HomeUncategorizedಡಾ.ರಾಜ್, 'ಬನ್ನಿ ಬನ್ನಿ ನಮ್ ಕಾಡಿನವರು' ಅಂತಿದ್ರು : ಸಿದ್ದರಾಮಯ್ಯ

ಡಾ.ರಾಜ್, ‘ಬನ್ನಿ ಬನ್ನಿ ನಮ್ ಕಾಡಿನವರು’ ಅಂತಿದ್ರು : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ರಾಜ್ ಕುಮಾರ್ ಹಾಗೂ ತಮ್ಮ ನಡುವಿನ ಒಡನಾಟದ ನೆನಪನ್ನು ಮೆಲುಕು ಹಾಕಿದ್ದಾರೆ.

ಡಾ.ರಾಜ್ ಕುಮಾರ್ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2022ರ ಯುಪಿಎಸ್ ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ್ದಾರೆ.

ನಾನು ಡಾ. ರಾಜ್ ಕುಮಾರ್ ಅವರನ್ನು ಭೇಟಿ ಮಾಡಲು ಹೋದಾಗಲಿಲ್ಲ, ‘ಬನ್ನಿ ಬನ್ನಿ ನಮ್ ಕಾಡಿನವರು’ ಎಂದು ಖುಷಿಯಿಂದ ಕರೆಯುತ್ತಿದ್ದರು. ನಾವಿಬ್ಬರೂ ಒಂದೇ ಜಿಲ್ಲೆಯವರು ಎಂದು ಸ್ಮರಿಸಿದ್ದಾರೆ.

ದೊಡ್ಡ ಸಂಸ್ಕಾರದ ರಾಯಭಾರಿ

ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ . ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ದೊಡ್ಡ ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ. ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್ ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನವೇ ನಮ್ಮ ಭಗವದ್ಗೀತೆ, ಕುರಾನ್, ಬೈಬಲ್ : ಡಿಸಿಎಂ ಡಿ.ಕೆ ಶಿವಕುಮಾರ್

ದೇಶದ ಪ್ರಗತಿಗೆ ಶ್ರಮಿಸಬೇಕು

ನಾನು ಮುಖ್ಯಮಂತ್ರಿ ಆಗುವುದಕ್ಕೆ ಸಮಾಜದ ಕೊಡುಗೆ ಅಪಾರ ಇದೆ. ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಅಪಾರವಾಗಿದ್ದಾರೆ. ಇವರಿಗೆ ಶಿಕ್ಷಣದ ಜತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್ ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ಡಾ.ಶ್ರೀನಿವಾಸನ್, ಭಾರತೀಯ ಸೇನಾ ಸಿಬ್ಬಂದಿಯ ಮಾಜಿ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಮೇಶ್ ಹಲಗಲಿ, ಮಾಜಿ ಪ್ರಧಾನ ಮುಖ್ಯ ಆಯುಕ್ತ ಕೆ.ಸತ್ಯನಾರಾಯಣ, ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಕೆ.ನಾರಾಯಣಗೌಡ ಅವರನ್ನು ಸನ್ಮಾನಿಸಲಾಯಿತು. ಅಕಾಡೆಮಿಯ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments