Sunday, August 24, 2025
Google search engine
HomeUncategorizedಉದ್ಯಮಿಗಳು ದೇಶದ ಆಸ್ತಿ : ಡಿ.ಕೆ ಶಿವಕುಮಾರ್

ಉದ್ಯಮಿಗಳು ದೇಶದ ಆಸ್ತಿ : ಡಿ.ಕೆ ಶಿವಕುಮಾರ್

ಬೆಂಗಳೂರು : ಉದ್ಯಮಿಗಳು ದೇಶದ ಆಸ್ತಿ, ಉದ್ಯೋಗ ಸೃಷಿಗೆ ನೀವು ಆಲೋಚನೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯುವಜನತೆಗಾಗಿ ಉದ್ಯೋಗ ಸೃಷ್ಟಿ ಮಾಡಬೇಕು ಅನ್ನುವುದು ನಮ್ಮ ಉದ್ದೇಶ. ನಮ್ಮ ಸರ್ಕಾರ ನಿಮ್ಮೊಂದಿಗೆ ಇರುತ್ತದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಬೆಂಗಳೂರನ್ನು ‘ಬ್ರಾಂಡ್‌ ಬೆಂಗಳೂರು’ ಮಾಡೋಣ ಎಂದು ಕರೆ ಕೊಟ್ಟರು.

ಇದನ್ನೂ ಓದಿ : ಸಚಿವ ಸ್ಥಾನಕ್ಕೆ ಯಾರಾದ್ರು ಭಿಕ್ಷೆ ಬೇಡ್ತಾರಾ? : ಶರಣಬಸಪ್ಪ ದರ್ಶನಾಪುರ

ಯುವಕರಿಗೆ ಉದ್ಯೋಗ ಸಿಗಲಿ

ಉದ್ಯಮಿಗಳು ದೇಶದ ಆಸ್ತಿ. ಉದ್ಯೋಗ ಸೃಷಿಗೆ ನೀವು ಆಲೋಚನೆ ಮಾಡಬೇಕು. ಗ್ರಾಮೀಣ ಭಾಗದ ಮಕ್ಕಳು ಬಹಳ ಬುದ್ದಿವಂತರಿದ್ದಾರೆ. ಹಳ್ಳಿಯ ಯುವಕರಿಗೆ ಉದ್ಯೋಗ ಸಿಗಲಿ. ನಗರ ಪ್ರದೇಶದ ಸೇರಿದಂತೆ ಗ್ರಾಮೀಣ ಭಾಗದಲ್ಲಿಯೂ ಉದ್ಯೋಗ ಸೃಷ್ಟಿ ಆಗಬೇಕು ಎಂದು ಹೇಳಿದರು.

ಉದ್ಯಮದಾರರ ಪಾತ್ರ ದೊಡ್ಡದು

ದೇಶದಲ್ಲಿ ಬೆಂಗಳೂರಿಗೆ ತನ್ನದೆ ಆದ ಇತಿಹಾಸವಿದೆ. ಬೆಂಗಳೂರು ಬೆಳೆಯಲು ರಾಜಕೀಯ ನಾಯಕರು, ಉದ್ಯಮದಾರರ ಪಾತ್ರ ದೊಡ್ಡದಿದೆ. ಬೇರೆ ರಾಜ್ಯಗಳಿಗಿಂತ ವಿವಿಧ ಕಂಪನಿಗಳನ್ನು ಸ್ಥಾಪಿಸಲು ಕರ್ನಾಟಕದಲ್ಲಿ ಉತ್ತಮ ಅವಕಾಶಗಳಿವೆ. ಎನ್​ಆರ್​ಐಗಳಿ​ಗಾಗಿ ಒಂದು ಪ್ರತ್ಯೇಕ ಇಲಾಖೆ ತೆರೆಯಲು ನಾವು ಸಿದ್ಧರಾಗಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments