Sunday, August 24, 2025
Google search engine
HomeUncategorizedಸರ್ಕಾರವನ್ನ ಡಿಸ್ಟರ್ಬ್ ಮಾಡ್ತಾರೆ.. ನಿಮ್ಮ ಕಣ್ಣು, ಕಿವಿ ಚುರುಕಿರಬೇಕು : ಸಿದ್ದರಾಮಯ್ಯ

ಸರ್ಕಾರವನ್ನ ಡಿಸ್ಟರ್ಬ್ ಮಾಡ್ತಾರೆ.. ನಿಮ್ಮ ಕಣ್ಣು, ಕಿವಿ ಚುರುಕಿರಬೇಕು : ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಸುಭದ್ರವಾಗಿದೆ. ಸರ್ಕಾರನ್ನು ಡಿಸ್ಟರ್ಬ್ ಮಾಡುವ ಪ್ರಯತ್ನ ನಡೆಯುತ್ತವೆ. ಇದರ ಬಗ್ಗೆ ನಿಮ್ಮ ಕಣ್ಣು,ಕಿವಿ ಚುರುಕಿರಬೇಕು. ನಿಮ್ಮನ್ನು ಬೇಕೇಂದೇ ದಾರಿ ತಪ್ಪಿಸುವ ಕೆಲಸ ಮಾಡ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ’ ಕಲಿಗಳಿಗೆ ಎಚ್ಚರಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಆಮೇಲೆ ಆ ಸುಳ್ಳನ್ನು ತಮ್ಮ ಪರಿವಾರದ ಮೂಲಕ ಹಬ್ಬಿಸುತ್ತಾರೆ. ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದು ಹಿತವಚನ ಮಾಡಿದರು.

ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ

ರಾಜ್ಯದ ಜನತೆ ಈ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡೀ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಅಂತ ಮಾಧ್ಯಮಗಳಲ್ಲಿ ವಿಶ್ಲೇಷಣೆ ಆಗ್ತಿದೆ. ಹೀಗಾಗಿ, ಸುಳ್ಳಿನ‌ ಸರಮಾಲೆಗಳ ಮೂಲಕ ಅವರು 5 ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದಿಂದಿರಿ. ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ ಎಂದು ಹೇಳಿದರು.

ನಕಲಿ ವಿಡಿಯೋಗಳನ್ನು ಸೃಷ್ಟಿಸ್ತಾರೆ

ನಮ್ಮ 5 ಗ್ಯಾರಂಟಿಗಳು ಎಲ್ಲಾ ಜಾತಿ, ಧರ್ಮ, ವರ್ಗಗಳ ಬದುಕಿಗೂ ಸ್ಪಂದಿಸಿವೆ. ಇದು ಬಿಜೆಪಿಗೆ ನಡುಕ ಹುಟ್ಟಿಸಿದೆ. ಹೀಗಾಗಿ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ವಿಪರೀತ ಸುಳ್ಳುಗಳನ್ನು, ನಕಲಿ ವಿಡಿಯೋಗಳನ್ನು ಸೃಷ್ಟಿಸುತ್ತಾರೆ. ಶಾಸಕರೊಬ್ಬರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ಸುದ್ದಿ ಮಾಡಿಸಿದ್ದು ಈ ಕುತಂತ್ರದ ಭಾಗವೇ ಆಗಿದೆ. ಈಗ ಶಾಸಕರೇ ಆ ಪತ್ರ ತಮ್ಮದಲ್ಲ ಎಂದು ಸ್ಪಷ್ಟನೆ ನೀಡಿದ್ದಾಗಿದೆ. ಆದ್ರೆ, ಸತ್ಯ ಏನು ಅಂತ ಗೊತ್ತಾಗುವಷ್ಟರಲ್ಲಿ ಅವ್ರು ಸುಳ್ಳನ್ನು ಹರಡಿದ್ದಾರೆ ಎಂದು ಗುಡುಗಿದರು.

ತಿಂಗಳಿಗೊಮ್ಮೆ ಶಾಸಕರ ಸಭೆ

ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಚರ್ಚಿಸುತ್ತೇನೆ. ಸರ್ಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments