Thursday, August 28, 2025
HomeUncategorizedಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ

ಬೆಂಗಳೂರು : ಮಕ್ಕಳನ್ನ ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ.

ವೀರಾರ್ಜುನ (31), ಹೇಮಾವತಿ (29) ಮೃತ ದಂಪತಿ. 1 ವರ್ಷದ ಮಗು ಮತ್ತು 3 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು. ನಿನ್ನೆ ರಾತ್ರಿ ಮಕ್ಕಳನ್ನು ಕೊಲೆಗೈದು ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಮೂಲತಃ ಆಂಧ್ರದ ಮೂಲದವರು ಎಂದು ತಿಳಿದುಬಂದಿದೆ.

ಇದನ್ನು ಓದಿ : ಕೊಬ್ಬರಿಗೆ 20 ಸಾವಿರ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ತುರುವೇಕೆರೆ ಬಂದ್

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ನಡೆದ ಘಟನೆ ಇಂದು 12 ಗಂಟೆಗೆ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಕೂಡಲೇ ಕಾಡುಗೋಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments