ಚಿಕ್ಕೋಡಿ : ಆಳದ ಬಾವಿಗೆ ಬಿದ್ದ ಎರಡು ಎತ್ತುಗಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಮದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಗಾಂಜಾ ಅಡ್ಡೆ ಮೇಲೆ ಪೊಲೀಸರ ದಾಳಿ: 29 ಕೆಜಿ ಗಾಂಜ ವಶಕ್ಕೆ!
ರೈತ ಭೀಮಪ್ಪ ಪೂಜೇರಿ ಎಂಬುವರಿಗೆ ಸೇರಿದ್ದ 2 ಎತ್ತುಗಳು ಇದಾಗಿದ್ದು, ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ವಿಚಾರ ತಿಳಿಸಲಾಯಿತು,
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದ ಘಟನಾ ಸ್ಥಳಕ್ಕೆ ಜೆಸಿಬಿ ಯಂತ್ರಗಳನ್ನು ತರಿಸಿ ಸ್ಥಳೀಯರ ನೆರವಿನೊಂದಿಗೆ 66 ಅಡಿ ಆಳದಲ್ಲಿ ಬಿದ್ದದ್ದ ಎರಡು ಎತ್ತುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಸದ್ಯ ಈ ಘಟನೆಯೂ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


