Saturday, August 23, 2025
Google search engine
HomeUncategorizedಡಿಸಿಎಂ ವಿಚಾರದಲ್ಲಿ ರಾಜಣ್ಣ ಹೇಳೋದರಲ್ಲಿ ತಪ್ಪಿಲ್ಲ : ಪರಮೇಶ್ವರ್

ಡಿಸಿಎಂ ವಿಚಾರದಲ್ಲಿ ರಾಜಣ್ಣ ಹೇಳೋದರಲ್ಲಿ ತಪ್ಪಿಲ್ಲ : ಪರಮೇಶ್ವರ್

ಬೆಂಗಳೂರು : ಸಚಿವ ಕೆ.ಎನ್ ರಾಜಣ್ಣ ಅವರು ತಪ್ಪು ಮಾಡಿದರು, ತಪ್ಪು ಹೇಳಿದರು ಅನ್ನೋದು ತಪ್ಪು. ರಾಜಣ್ಣ ಅವರು ವೈಯುಕ್ತಿಕ ಹೇಳಿಕೆ ಕೊಟ್ಟಿದ್ದಾರೆ ಎಂದು ಕೆಎನ್​ಆರ್ ಹೇಳಿಕೆಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಮರ್ಥನೆ ಮಾಡಿಕೊಂಡರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವೈಯುಕ್ತಿಕ ಹೇಳಿಕೆ ಕೊಡುತ್ತೇನೆ. ಆದರೆ, ಅವರು ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆ ಎನ್ನುವುದು ಮುಖ್ಯ. ಸಂಪೂರ್ಣವಾಗಿ ಎಲ್ಲವೂ ಹೈ ಕಮಾಂಡ್​ಗೆ ಬಿಟ್ಟಿರುವುದು ಎಂದು ಹೇಳಿದರು.

ಡಿಸಿಎಂ ವಿಚಾರದಲ್ಲಿ ರಾಜಣ್ಣ ಹೇಳೋದರಲ್ಲಿ ತಪ್ಪಿಲ್ಲ. ಅವರು ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹೇಳಿದ್ದಾರೆ. ಪಕ್ಷ ಇನ್ನಷ್ಟು ಸದೃಢವಾಗಬೇಕು, ಆ‌ ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಎಂಬ ದೃಷ್ಟಿಯಿಂದ ಹೇಳಿದ್ದಾರೆ. ಒಂದು ಸಂದೇಶ ಹೋಗಲಿ ಅಂತ ಅವರು ಹೇಳಿದ್ದಾರೆ ಎಂದು ರಾಜಣ್ಣ ಪರ ಪರಮೇಶ್ವರ್ ಬ್ಯಾಟ್ ಬೀಸಿದರು.

ಅದಕ್ಕೆ ಸರ್ಕಸ್ ನಡೆಯುತ್ತಿದೆ

ಲೋಕಸಭೆಯಲ್ಲಿ ಸೋತರೆ ಮ್ಯಾಂಡೆಟ್ರಿ ಇಲ್ಲ ಅಂತ ಸರ್ಕಾರ ವಿಸರ್ಜಸಿದ ಘಟನೆ ನಡೆದಿದೆ ಎಂಬ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇರಬಹುದು.. ಹಿಂದೆ ಅಂತಹ ಘಟನೆಗಳು ನಡೆದಿದ್ದಾವಲ್ಲ. ಹಿಂದೆ ರಾಮಕೃಷ್ಣ ಹೆಗ್ಡೆ ಅವರ ಕಾಲದಲ್ಲಿ ಬೇರೆ ಬೇರೆ ಸಂದರ್ಭದಲ್ಲಿ ನಡೆದಿದೆ. ಆದರೆ, ಈ ಬಾರಿ ಹಾಗೆ ಆಗಬಾರದು ಅಂತ ಎಚ್ಚರಿಕೆ ಕೊಟ್ಟಿರಬಹುದು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಬಂದರೆ ನಮಗೆ ಅನುಕೂಲ ಅಲ್ವಾ? ಅದಕ್ಕೆ ಇದೆಲ್ಲ ಸರ್ಕಸ್ ನಡೆಯುತ್ತಿರುವುದು ಎಂದು ಸಮರ್ಥನೆ ಮಾಡಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments