Saturday, August 23, 2025
Google search engine
HomeUncategorizedಪಾಕಿಸ್ತಾನದ ಜೊತೆ ಮಾತಾಡಿ ಬಗೆಹರಿಸಿಕೊಳ್ತಾರೆ, ತಮಿಳುನಾಡು ಜೊತೆ ಯಾಕೆ ಮಾತನಾಡಲು ಆಗಲ್ಲ : ಸುಮಲತಾ

ಪಾಕಿಸ್ತಾನದ ಜೊತೆ ಮಾತಾಡಿ ಬಗೆಹರಿಸಿಕೊಳ್ತಾರೆ, ತಮಿಳುನಾಡು ಜೊತೆ ಯಾಕೆ ಮಾತನಾಡಲು ಆಗಲ್ಲ : ಸುಮಲತಾ

ಮಂಡ್ಯ : ಕೇಂದ್ರ ಇರಲಿ, ರಾಜ್ಯ ಸರ್ಕಾರ ಇರಲಿ ಮಧ್ಯಪ್ರವೇಶ ಮಾಡಲು ಆಗಲ್ಲ. ಆದರೆ, ಎರಡು ರಾಜ್ಯಗಳು ಪರಸ್ಪರ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಬಹುದು. ಲೀಗಲ್ ಆಕ್ಷನ್ ಆಗಲ್ಲ ಎಂದರೆ ಮಾತನಾಡಿ ಬಗೆಹರಿಸಿ. ನೀರು ಕೊಡಲ್ಲ ಎನ್ನಲಾಗಲ್ಲ. ಆದರೆ, ನಮ್ಮ ಅಗತ್ಯತೆಯನ್ನು ನೋಡಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತ್ರು ರಾಷ್ಟ್ರ ಪಾಕಿಸ್ತಾನದ ಜೊತೆ ಮಾತನಾಡಿ ಬಗೆಹರಿಸಿಕೊಳ್ತಾರೆ. ಅದೇ ರೀತಿ ತಮಿಳುನಾಡು ಜೊತೆ ಯಾಕೆ ಮಾತನಾಡಲು ಆಗಲ್ಲ. ಈ ಸಮಸ್ಯೆ ಬಗೆಹರಿಸುವ ಪ್ರಯತ್ನ ಸರ್ಕಾರ ಮಾಡಬೇಕು ಎಂದರು.

ಕಾವೇರಿ ವಿಚಾರ ಮಾತನಾಡಲು ಪಾರ್ಲಿಮೆಂಟ್‌ನಲ್ಲಿ ಅವಕಾಶ ಕೇಳಿದ್ದೇನೆ. ರೈತರ ಸಮಸ್ಯೆ ಬಗ್ಗೆ ಆದ್ಯತೆ ಮೇರೆಗೆ ಮಾತನಾಡಿದ್ದೇನೆ. ಅಂಬರೀಶ್ ಕಾವೇರಿ ವಿಚಾರದಲ್ಲಿ ರಾಜಿನಾಮೆ ನೀಡಿದ್ರು. ಅದೇ ಹಾದಿಯಲ್ಲಿ, ನನ್ನ ವ್ಯಾಪ್ತಿಯಲ್ಲಿ ನಾನು ಏನು ಮಾಡಬಹುದು ಮಾಡ್ತೀನಿ. ರೈತರ ಸಲಹೆಗಳನ್ನು ಕೇಳ್ತೀನಿ. ರಾಜಕೀಯ ಬೆರೆಸದೆ ಈ ವಿಚಾರದಲ್ಲಿ ಸರ್ಕಾರದ ಜೊತೆ ನಿಲ್ಲಲು ಸಿದ್ದ. ಇದು ಒಬ್ಬರ ಜವಬ್ದಾರಿ ಅಲ್ಲ ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಕೂಡಲೇ ರೈತರಿಗೆ ಪರಿಹಾರ ಕೊಡಬೇಕು

ಕುಡಿಯುವ ನೀರು ಬಿಟ್ಟರೆ ಕೃಷಿಗೆ ನೀರು ಬಿಡಲು ಆಗಲ್ಲ ಅಂತ ಅಧಿಕಾರಿಗಳು ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಪರ ನಿಲ್ಲಬೇಕು. ರೈತರು ಈಗಾಗಲೇ ಪ್ರತಿಭಟನೆ ಮಾಡ್ತಿದ್ದಾರೆ. ಕುಡಿಯಲು ಮಾತ್ರ ನೀರು ಕೊಟ್ರೆ ಸರ್ಕಾರ ಕೂಡಲೇ ರೈತರಿಗೆ ಪರಿಹಾರ ಕೊಡಬೇಕು. ರೈತರು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಬೇಕು. ಆಗ ಇಂತಹ ಸಂದರ್ಭದಲ್ಲಿ ನೆರವಾಗುತ್ತದೆ. ಆದರೆ, ದುರಾದೃಷ್ಟವಶಾತ್ ಬಹಳಷ್ಟು ರೈತರು ವಿಮೆಗೆ ಮುಂದೆ ಬರಲ್ಲ. ಮಳೆ ಬಂದಾಗ ಕಷ್ಟದ ದಿನಗಳನ್ನು ಮರೆತುಬಿಡ್ತಾರೆ. ಆದರೆ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments