Saturday, August 23, 2025
Google search engine
HomeUncategorizedಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಕಳೆದ 9ರಿಂದ 10 ವರ್ಷದಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿರೋಧ ಪಕ್ಷಗಳನ್ನು ಮುಗಿಸಲು ಸಂಚು ರೂಪಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕೇವಲ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಆಗುತ್ತೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂಬ ಭಯದಲ್ಲಿ ಈ ಹಿಂದೆ ಡಿ.ಕೆ. ಶಿವಕುಮಾರ್ ಮೇಲೆ ಇಡಿಯಿಂದ ದಾಳಿ ನಡೆಸಲಾಯಿತು ಎಂದು ಕುಟುಕಿದ್ದಾರೆ.

13 ತಿಂಗಳ ನಂತರ ಎಫ್​ಐಆರ್

24-09-2019ರಂದು ಅಂದಿನ ಬಿಜೆಪಿ ಸರ್ಕಾರದ ಸಿಎಂ ಫೋನ್ ನಲ್ಲಿ ನೇರವಾಗಿ ಸಿಬಿಐ ಜೊತೆ ಮಾತನಾಡಿದ್ದರು. ಪ್ರಕಾರಣವನ್ನು ಸಿಬಿಐಗೆ ವರ್ಗಾಯಿಸುವ ಮೊದಲು ಅನುಸರಿಸಬೇಕಿದ್ದ ಮಾನದಂಡಗಳನ್ನು ಸರ್ಕಾರ ಪಾಲಿಸಿಲ್ಲ. ರಾಜ್ಯ ತನಿಖಾ ತಂಡಗಳನ್ನು ನಿರ್ಲಕ್ಷಿಸಿ ಕೇಂದ್ರ ತನಿಖಾ ತಂಡಕ್ಕೆ ನೀಡುವ ಅನಿವಾರ್ಯತೆ ಏನಿತ್ತು? ಪ್ರಕಾರಣದ ಕುರಿತು ಎಫ್​ಐಆರ್​ (FIR) ಕೂಡ ದಾಖಲಾಗಿರಲಿಲ್ಲ. 13 ತಿಂಗಳ ನಂತರ ಎಫ್​ಐಆರ್​ (FIR) ದಾಖಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments