Saturday, August 23, 2025
Google search engine
HomeUncategorizedಮದುವೆಗೆ ಹೊರಟಿದ್ದವರು ಮಸಣಕ್ಕೆ! : ನಾಲ್ವರು ಸಾವು, 15 ಮಂದಿಗೆ ಗಂಭೀರ ಗಾಯ

ಮದುವೆಗೆ ಹೊರಟಿದ್ದವರು ಮಸಣಕ್ಕೆ! : ನಾಲ್ವರು ಸಾವು, 15 ಮಂದಿಗೆ ಗಂಭೀರ ಗಾಯ

ಚಿತ್ರದುರ್ಗ : ಮದುವೆಗೆ ಹೊರಟಿದ್ದ ಖಾಸಗಿ ಬಸ್ ಭೀಕರ ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ದಾವಣಗೆರೆಯಲ್ಲಿ ನಾಳೆ ನಿಶ್ಚಯವಾಗಿದ್ದ ಮದುವೆಗೆ 50ಕ್ಕೂ ಅಧಿಕ ಜನರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಇಬ್ಬರು ಬಸ್‌ನಡಿ ಸಿಲುಕಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ. 15ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

50ಕ್ಕೂ ಹೆಚ್ಚು ಜನರಿದ್ದ ಬಸ್ ಮದುವೆಗೆಂದು ಚಿತ್ರದುರ್ಗದ ಸೀಗೆಹಟ್ಟಿಯಿಂದ ದಾವಣಗೆರೆಗೆ ಹೊರಟಿತ್ತು. ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ ಸಂಪೂರ್ಣವಾಗಿ ಮಗುಚಿ ಬಿದ್ದಿದೆ.

ಈ ಸುದ್ದಿ ಓದಿದ್ದೀರಾ? : ಖಾಸಗಿ ಬಸ್ ಚಾಲಕನ ಅತಿವೇಗಕ್ಕೆ ಇಬ್ಬರು ಸಾವು, ನಿದ್ರೆಗೆ ಜಾರಿದ RTO ಅಧಿಕಾರಿಗಳು?

ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ?

ಬಸ್​ನಲ್ಲಿದ್ದವರೆಲ್ಲರೂ ಚಿಕ್ಕ ಎಗಟಿ ಗ್ರಾಮದವರು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೆಸಿಬಿ ತರಿಸಿ ಬಸ್ ಮೇಲಕ್ಕೆತ್ತಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments