Saturday, August 23, 2025
Google search engine
HomeUncategorizedಕನ್ನಡ ಹಾಡು ಹಾಡಿ ಪ್ರಧಾನಿಗೆ ಮೆಚ್ಚುಗೆಯಾಗಿರುವ ಶಿವಶ್ರೀ ಯಾರು?

ಕನ್ನಡ ಹಾಡು ಹಾಡಿ ಪ್ರಧಾನಿಗೆ ಮೆಚ್ಚುಗೆಯಾಗಿರುವ ಶಿವಶ್ರೀ ಯಾರು?

ಬೆಂಗಳೂರು: ‘ಪೂಜಿಸಲೆಂದೆ ಹೂಗಳ ತಂದೆ..’ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.ಈ ಹಾಡಿನ ಲಿಂಕ್​ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಶ್ರೀ ಯಾರು ಎಂದು ಸೋಶಿಯಲ್​ ಮೀಡಿಯಾದಲ್ಲಿ ಹುಡುಕಾಟ ನಡೆದಿದೆ.

ಗಾಯಕಿ ಶಿವಶ್ರೀ ಯಾರು..?

ಶಿವಶ್ರೀ ಅವರು ಕಲಾವಿದರ ಕುಟುಂಬದಿಂದಲೇ ಬಂದವರು. ಹೀಗಾಗಿ, ಅವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತದ ಬಗ್ಗೆ ಒಲವು ಇತ್ತು. ಶಾಸ್ತ್ರೀಯ ಸಂಗೀತ, ಭರತನಾಟ್ಯವನ್ನು ಅವರು ಕಲಿತಿದ್ದಾರೆ. ಶಿವಶ್ರೀ ಅವರ ತಾತ ಖ್ಯಾತ ಸಂಗೀತಕಾರರಾಗಿದ್ದರು. ಶಿವಶ್ರೀ ಅವರ ತಂದೆ ಖ್ಯಾತ ಮೃದಂಗ ವಾದಕ ವಿದ್ವಾನ್ ಸೀರ್ಕಾಜಿ ಜೆ. ಸ್ಕಂದಪ್ರಸಾದ್. ಶಿವಶ್ರೀ ಅವರು ಎ.ಎಸ್. ಮುರಳಿ ಮತ್ತು ಆಚಾರ್ಯ ಚೂಡಾಮಣಿ ಅವರಲ್ಲಿ ಸಂಗೀತ  ಕಲಿತಿದ್ದಾರೆ. ರೋಜಾ ಕಣ್ಣನ್ ಅವರಿಂದ ಭರತನಾಟ್ಯ ತರಬೇತಿ ಪಡೆದಿದ್ದಾರೆ.

ಶಿವಶ್ರೀ ಅವರ ಸಹಜ ಪ್ರತಿಭೆ, ಕುಟುಂಬದ ಪ್ರೋತ್ಸಾಹ, ಕಠಿಣ ಪರಿಶ್ರಮ ಮತ್ತು ಶಾಸ್ತ್ರೀಯ ಕಲೆಗಳಲ್ಲಿ ತೋರಿದ ಉತ್ಸಾಹದಿಂದ ವೃತ್ತಿಪರ ಕಲಾವಿದೆಯಾಗಿ ಬೆಳೆಯಲು ಸಹಕಾರಿ ಆಯಿತು. ಶಿವಶ್ರೀ ಅವರು ಬಯೋ-ಇಂಜಿನಿಯರಿಂಗ್ ಪದವೀಧರೆ ಆಗಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂಎ ಭರತನಾಟ್ಯ ಮತ್ತು ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಡಿಪ್ಲೊಮಾ ಪಡೆದಿದ್ದಾರೆ.
ಇವರು ಗಾಯಕ ಭಜನೆಗಳನ್ನು ಮಾತ್ರ ಹಾಡಿಲ್ಲ, ಅವರು ಅನೇಕ ಮಸಾಲಾ ಬ್ರಾಂಡ್ ಗಳಿಗೆ ಜಿಂಗಲ್‌ಗಳನ್ನು ಸಹ ಹಾಡಿದ್ದಾರೆ. ಇದರಲ್ಲಿ ಗೋಲ್ಡ್ ವಿನ್ನರ್, ಸರವಣ ಸ್ಟೋರ್ಸ್ ಮತ್ತು ಶಕ್ತಿ ಮಸಾಲಾ ಸೇರಿವೆ. ಶಿವಶ್ರೀ ಸ್ಕಂದ ಪ್ರಸಾದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ ಮತ್ತು ಸಕ್ರಿಯರಾಗಿದ್ದಾರೆ. ಅವರನ್ನು 80 ಸಾವಿರ ಮಂದಿ ಫಾಲೋ ಮಾಡುತ್ತಿದ್ದಾರೆ.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments