Sunday, August 24, 2025
Google search engine
HomeUncategorizedರಾಜ್ಯ ಕಾಂಗ್ರೆಸ್‌ ಬೆತ್ತಲಾಗಿದೆ: ಎಚ್​.ಡಿ ಕುಮಾರಸ್ವಾಮಿ 

ರಾಜ್ಯ ಕಾಂಗ್ರೆಸ್‌ ಬೆತ್ತಲಾಗಿದೆ: ಎಚ್​.ಡಿ ಕುಮಾರಸ್ವಾಮಿ 

ಬೆಂಗಳೂರು: ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಇದೀಗ ಬೆತ್ತಲಾಗಿದೆ. ಇದರ ಉದ್ದೇಶ ಲೋಕಸಭೆ ಚುನಾವಣೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ ಪೋಸ್ಟ್‌ ಮಾಡಿರುವ ಅವರು, ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ ಲೋಕಸಭೆ ಚುನಾವಣೆಗಾಗಿ ಮಾತ್ರ

ಕೇರಳದ ಸಿಎಂ ಶ್ರೀ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ. 
ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ.
 ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ.
ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? 4/5 ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳು ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಕಿಡಿಕಾರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments