Tuesday, September 16, 2025
HomeUncategorizedಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ : ಡಾ. ಕೆ. ಸುಧಾಕರ್

ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ : ಡಾ. ಕೆ. ಸುಧಾಕರ್

ಬೆಂಗಳೂರು: ಕೊರೋನಾ ವೈರಸ್ ಮಾಹಿತಿ ವಿಚಾರವಾಗಿ ಸಚಿವರಾದ ಡಾ.ಕೆ ಸುಧಾಕರ್ ಹಾಗೂ ಶ್ರೀರಾಮುಲು ನಡುವೆ ಭಿನ್ನಾಭಿಪ್ರಾಯವಿದೆ ಎಂದು ಸುದ್ದಿ ಹಬ್ಬುತ್ತಿದೆ. ಇದರ ಬೆನ್ನಲ್ಲೆ ಅದರ ಬಗ್ಗೆ  ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ರಾಜ್ಯದ ಜನರ ಹಿತಾಸಕ್ತಿಗಾಗಿ ಅಣ್ಣ–ತಮ್ಮಂದಿರಂತೆ ಶ್ರಮಿಸುತ್ತಿದ್ದೇವೆ. ಕೋವಿಡ್ -19 ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಈ ಸಮಸ್ಯೆಗೆ ಒಟ್ಟಾಗಿ ಪರಿಹಾರ ಹುಡುಕುತ್ತಿದ್ದೇವೆ‘ ಎಂದಿದ್ದಾರೆ.

ಇನ್ನು ಇಂತ ಹ ಪರಿಸ್ಥಿತಿಯಲ್ಲಿಯೂ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮಗೆ ನಮ್ಮದೇ ಆದ ಜವಾಬ್ದಾರಿಗಳಿವೆ. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುವುದರ ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ ಎಂದು ವೈದ್ಯಕೀಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.  

 

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments