Monday, September 15, 2025
HomeUncategorizedಕಳೆದ ಬಾರಿ ಸರ್ಕಾರ ರಚಿಸಲು ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದ್ದರು : ಜೋಶಿ

ಕಳೆದ ಬಾರಿ ಸರ್ಕಾರ ರಚಿಸಲು ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದ್ದರು : ಜೋಶಿ

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹುಬ್ಬಳ್ಳೀಯಲ್ಲಿ ಹೊಸ ಬಾಂಬ್​ ಸಿಡಿಸಿದ್ದು. ಕಳೆದ ಬಾರಿ ಬಿಜೆಪಿ ಸರ್ಕಾರ ರಚಿಸಲು ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದ್ದರು ಎಂದು ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.

ಹುಬ್ಬಳಿಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಪ್ರಹ್ಲಾದ್​ ಜೋಶಿ ಕಳೆದ ಬಾರಿ ಸರ್ಕಾರ ಮಾಡಲು ಸಿದ್ದರಾಮಯ್ಯರಿಗೆ ನೈತಿಕತೆ ಇರಲಿಲ್ಲ. ಹೀಗಾಗಿ ಕೆಲ ಶಾಸಕರನ್ನು ಸಿದ್ದರಾಮಯ್ಯನವರೆ ಬಿಜೆಪಿಗೆ ಕಳುಹಿಸಿದ್ದರು, ಹೀಗಾಗಿ ನಾವು ಸರ್ಕಾರ ರಚನೆ ಮಾಡಬೇಕಾಗಿ ಬಂತು ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಪ್ರಹ್ಲಾದ್​ ಜೋಶಿ ಈ ಬಾರಿ ಕಾಂಗ್ರೆಸ್​​​ ಸರ್ಕಾರಕ್ಕೆ ಬಹುಮತ ಬಂದಿದೆ ಅದಕ್ಕೆ ಅವರು ಅಧಿಕಾರದಲ್ಲಿದ್ದಾರೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡೋಣ ಎಂದು ನಿರ್ಧರಿಸಿದ್ದೇವೆ. ಕಳೆದ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಶಾಸಕರನ್ನು ಕಳುಹಿಸಿದರು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments