Thursday, August 28, 2025
HomeUncategorizedಕಾಲೇಜಿನ ಮೂರನೇ ಮಹಡಿಯಿಂದ ಜಿಗಿದು 16 ವರ್ಷದ ಬಾಲಕ ಆತ್ಮಹ*ತ್ಯೆ !

ಕಾಲೇಜಿನ ಮೂರನೇ ಮಹಡಿಯಿಂದ ಜಿಗಿದು 16 ವರ್ಷದ ಬಾಲಕ ಆತ್ಮಹ*ತ್ಯೆ !

ಸೋಮಲದೊಡ್ಡಿ: 16 ವರ್ಷದ ಬಾಲಕನೊಬ್ಬ ತನ್ನ ಕಾಲೇಜಿನ ಮೂರನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. 

ಅನಂತಪುರ ಗ್ರಾಮಾಂತರ ಉಪವಿಭಾಗದ ಪೊಲೀಸ್ ಅಧಿಕಾರಿ ಟಿ.ವೆಂಕಟೇಶುಲು ಪ್ರಕಾರ, ನಾರಾಯಣ ಜೂನಿಯರ್ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಬಾಲಕ, ಸಂಕ್ರಾಂತಿ ರಜೆ ಮುಗಿಸಿ ಬೆಳಗ್ಗೆ ಕಾಲೇಜಿಗೆ ಮರಳಿದ್ದನು.ರಜೆ ಮುಗಿಸಿ ಗುರುವಾರ ಬೆಳಗ್ಗೆ 9:30ರ ಸುಮಾರಿಗೆ ಕಾಲೇಜಿಗೆ ಬಂದ ಈ ಬಾಲಕ 11:55ರ ಸುಮಾರಿಗೆ ತರಗತಿ ನಡೆಯುತ್ತಿದ್ದಾಗ ಏಕಾಏಕಿ ತರಗತಿಯಿಂದ ಹೊರಗೆ ಬಂದು ಮೂರನೇ ಮಹಡಿಯಿಂದ ಜಿಗಿದಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ವಾರ್ಷಿಕ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ !

ಕಾಲೇಜು ಆಡಳಿತ ಮಂಡಳಿ ತಕ್ಷಣ ಗಾಯಗೊಂಡ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಕೆಲ ಕಾಲದ ನಂತರ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಕಾಲೇಜಿನ ಸಿಸಿಟಿವಿ ದೃಶ್ಯಾವಳಿಗಳು ಘಟನೆಯನ್ನು ಸೆರೆಹಿಡಿಯಲಾಗಿದ್ದು, ತರಗತಿಯ ಸಮಯದಲ್ಲಿ ಹುಡುಗ ತನ್ನ ಬೆಂಚ್‌ನಿಂದ ಎದ್ದು ನೇರವಾಗಿ ಮೂರನೇ ಮಹಡಿಯಿಂದ ಜಿಗಿಯುತ್ತಿರುವ ದೃಷ್ಯಗಳು ಸೆರೆಯಾಗಿದೆ. 

ವಿದ್ಯಾರ್ಥಿಯು ಶ್ರೀ ಸತ್ಯಸಾಯಿ ಜಿಲ್ಲೆಯ ಬತ್ತೇನಪಲ್ಲಿ ಮಂಡಲದ ರಾಮಪುರಂ ಗ್ರಾಮದ ನಿವಾಸಿಯಾಗಿದ್ದು. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments