ಸುಹಾಸ್​ ಶೆಟ್ಟಿ ಹತ್ಯೆಗೂ ಮುನ್ನ ಕ್ಯಾಂಪ್​ ಫೈರ್​ ಹಾಕಿ ಪಾರ್ಟಿ ಮಾಡಿದ್ದ ಆರೋಪಿಗಳು

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಲಭ್ಯವಾಗಿದೆ. ಕ್ಯಾಂಪ್​ ಫೈರ್ ಹಾಕಿ ಹತ್ಯೆ ನಡೆಸಲು ಪ್ಲಾನ್​ ರೂಪಿಸಿದ್ದರ ಎಂಬ ಅನುಮಾನಗಳು ವ್ಯಕ್ತವಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಕೊಲೆ ಮಾಡುವ ಮುನ್ನ ಆರೋಪಿಗಳು ಚಿಕ್ಕಮಗಳೂರಿನ,  ಕಳಸದ ರೆಸಾರ್ಟ್ ಒಂದರಲ್ಲಿ ಏ.2 ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ. ಹತ್ಯೆಗೆ ಸ್ಕೆಚ್ ರೂಪಿಸಲೆಂದೇ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಕ್ಯಾಂಪ್ ಫೈರ್ ಹಾಕಿ ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ ಐದು ಜನ ಅಪರಿಚಿತರು ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:ಉಗ್ರರ ಅಡಗುತಾಣ ಪತ್ತೆ: 5 IED ಬಾಂಬ್​ ಸೇರಿದಂತೆ ಅನೇಕ ವಸ್ತುಗಳು ವಶ

ಇನ್ನು ಈ ಪಾರ್ಟಿಯಲ್ಲಿ ಹಿಂದೂ ಯುವಕ ರಂಜಿತ್​ನನ್ನು ಮುಝಮ್ಮಿಲ್‌ಗೆ ನಿಯಾಜ್‌ ಪರಿಚಯ ಮಾಡಿಕೊಟ್ಟಿದ್ದ. ಈ ಪಾರ್ಟಿಯಲ್ಲೇ ಸುಹಾಸ್ ಹತ್ಯೆ ಬಗ್ಗೆ ಮಾತುಕತೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ಮೇ.9ರವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ :ಪೊಲೀಸರಿಂದಲೇ ಬಡ್ಡಿ ದಂಧೆ: ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್​..!‘

ಸುಹಾಸ್​ ಶೆಟ್ಟಿ ಹತ್ಯೆ ಬೆನ್ನಲ್ಲೇ ಹಿಂದೂ ಮುಖಂಡ ಶರಣ್‌ ಪಂಪ್ವೆಲ್‌ಗೂ ಜೀವ ಬೆದರಿಕೆ ಹಾಕಿದ್ದು. ಯೂಟ್ಯೂಬ್‌ ಲೈವ್‌ನಲ್ಲಿ ‘ಮುಂದಿನ ಟಾರ್ಗೆಟ್​ ಶರಣ್​ ಪಂಪ್ವೆಲ್​ ಎಂದು ಬೆದರಿಕೆ ಹಾಕಲಾಗಿದೆ. ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು. ಶರಣ ಪಂಪ್ವೆಲ್​ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

 

RELATED ARTICLES

Related Articles

TRENDING ARTICLES