ಮಂಗಳೂರು : ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ನಡುವೆ ಹಿಂದೂ ಮುಖಂಡರಿಗೆ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದ್ದು. ವಾಟ್ಸಪ್ನಲ್ಲಿ ಆಡಿಯೋ ಮೆಸಜ್ ಕಳಿಸಿ ಬೆದರಿಕೆ ಹಾಕಿದ್ದಾರೆ. ಈ ಸಂದೇಶದಲ್ಲಿ ಹಿಂದೂ ಮುಖಂಡರ ತಲೆ ಕಡಿದು ದೆಹಲಿ ಗೇಟ್ಗೆ ನೇತು ಹಾಕುತ್ತೇವೆ ಎಂದು ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ನಡೆದ ಕೆಲವೇ ದಿನಗಳ ಅಂತರದಲ್ಲಿ ಮಂಗಳೂರಿನಲ್ಲಿ ರಹೀಂ ಎಂಬಾತನ ಕೊಲೆಯಾಗಿದೆ. ಇದರ ನಡುವೆ ಹಿಂದೂ ಮುಖಂಡರ ಕೊಲೆ ಮಾಡುವುದಾಗಿ ಬೆದರಿಕೆ ಕರೆಗಳು ಕೇಳಿ ಬರುತ್ತಿದ್ದು. ಹಿಂದು ಸಂಘಟನೆ ಮುಖಂಡರಿಗೆ ಜೈಷ್ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ವಾಟ್ಸಪ್ನಲ್ಲಿ ಆಡಿಯೋ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಇದನ್ನೂ ಓದಿ :‘ಧೈರ್ಯದಿಂದ ಆಟವಾಡಿ’; ಫೈನಲ್ ಪಂದ್ಯಕ್ಕೂ ಮುನ್ನ RCB ಆಟಗಾರರಿಗೆ ಸಂದೇಶ ರವಾನಿಸಿದ ಮಲ್ಯ
ಆಡಿಯೋದಲ್ಲಿ ಏನಿದೆ..!
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಹಾಕಲಾಗಿದ್ದು. ಈ ಆಡಿಯೋದಲ್ಲಿ ‘ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ಅದರಲ್ಲಿ ನಿನ್ನ ಹೆಸರು ಹಿಟ್ ಲೀಸ್ಟ್ನಲ್ಲಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ, ಕೊಲೆಯಾದ ಸುಹಾಸ್ ಶೆಟ್ಟಿ ಕೂಡ ನಮ್ಮ ಲಿಸ್ಟ್ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ. ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ಇದನ್ನೂ ಓದಿ :ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಲಿಗಳ ಕಾಟ; ಬಾಳೆಹಣ್ಣು ತಿನ್ನುವ ವಿಡಿಯೋ ವೈರಲ್
ನಿಮನ್ನು ಸುಲಭವಾಗಿ ಕೊಲ್ಲುವುದಿಲ್ಲ, ಮೊದಲು ಕೈಕಾಲು ಕಡಿಯುತ್ತೇವೆ, ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿರಲ್ಲ. ನಿನ್ನ ಕೊಂದ ರೀತಿಯನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ, ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು.
ಇದನ್ನೂ ಓದಿ :ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 36 ಹಸುಗಳ ರಕ್ಷಣೆ
ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಮುಗಿಸಲಾಗುವುದು ಎಂದು ಜೈಷ್-ಎ- ಮೊಹಮ್ಮದ್ ಸಂಘಟನೆಯಿಂದ ಸಂದೇಶ ಬಂದಿದ್ದು. ಸಿರಿಯಾ, ಪಾಕಿಸ್ತಾನ, ಅಫ್ಘಾನಿಸ್ತಾನ, ಸೌದಿ ಅರೇಬಿಯಾದ ದೂರವಾಣಿ ಸಂಖ್ಯೆಗಳಿಂದ ಸಂದೇಶ ಬಂದಿವೆ. ಇದರ ಬಗ್ಗೆ ನರಸಿಂಹ ಮಾಣಿ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದಾರೆ.