Saturday, August 23, 2025
Google search engine
HomeUncategorizedಭೂತದ ಬಾಯಲ್ಲಿ ಭಗವದ್ಗೀತೆ ಬಂದಂಗಾಯ್ತು : ಸಂಸದ ಪ್ರತಾಪ್ ಸಿಂಹ

ಭೂತದ ಬಾಯಲ್ಲಿ ಭಗವದ್ಗೀತೆ ಬಂದಂಗಾಯ್ತು : ಸಂಸದ ಪ್ರತಾಪ್ ಸಿಂಹ

ಮೈಸೂರು : ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್​​ನಲ್ಲಿ ಅವಕಾಶ ಸಿಗದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವಿಚಾರವಾಗಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕಮಾಲೆ ಕಣ್ಣಿಗೆ ಕಾಣುವುದೆಲ್ಲಾ ಹಳದಿ ಎಂಬಂತಾಗಿದೆ ಸಿದ್ದರಾಮಯ್ಯ ಅವರ ವರ್ತನೆ. ರಾಜ್ಯದಲ್ಲಿ ಕ್ಯಾಂಟಿನ್​​ಗೆ ಹೆಸರಿಡುವಾಗ ಈ ನೆಲದ ಮಹಾ ಪುರುಷರ ಹೆಸರು ಅವರಿಗೆ ನೆನಪಾಗಲಿಲ್ಲ ಆಗ ಸಿದ್ದರಾಮಯ್ಯನವರಿಗೆ ನೆನಪಾಗಿದ್ದು ಇಂದಿರಾಗಾಂಧಿ ಹೆಸರು ಮಾತ್ರ. ಅಧಿಕಾರದಲ್ಲಿ ಇರುವಾಗ ಅವರಿಗೆ ಮಹಾನೀಯರು ಯಾರೂ ನೆನಪಾಗುವುದಿಲ್ಲ , ಅಧಿಕಾರ ಹೋದಾಗಲೇ ಎಲ್ಲಾ ಕನ್ನಡದ ಮಹಾನೀಯರು ನೆನಪಾಗುತ್ತಾರೆ.

ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿದ್ದಾಗ ನೆನಪಾಗಲಿಲ್ಲ. ಈಗ ಭೂತದ ಬಾಯಲ್ಲಿ ಭಗವದ್ಗಿತೆ ಎಂಬಂತೆ ಮಹಾನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ.

ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧ ಚಿತ್ರ ಮಾಡಿರುತ್ತಾರೋ ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಪ್ರಕ್ರಿಯೆ ಪಾರದಾರ್ಶಕವಾಗಿರುತ್ತದೆ. ಇಲ್ಲಿ ಯಾರಿಗೂ ಅವಮಾನ ಮಾಡುವ ಪ್ರಶ್ನೆಯೇ ಇರುವುದಿಲ್ಲ. ಬೇಕು ಎಂದರೆ ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರಗಳ ಮಾರ್ಗಸೂಚಿ ಓದಿಕೊಳ್ಳಲಿ ತದ ನಂತರ ಉತ್ತರಿಸಲಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಹೇಳಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments