Thursday, August 28, 2025
HomeUncategorizedಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆ

ಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆ

ವಿಜಯಪುರ : ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮೇಲೆ ಜೂನ್ 2 ರ ಮಧ್ಯರಾತ್ರಿ ಹಲ್ಲೆ ಮಾಡಲಾಗಿದ್ದು, ವಿಜಯಪುರ ಡಿಪೋಗೆ ಸೇರಿದ ಬಸ್ ಕಿಟಕಿ ಗಾಜು ಒಡೆದು ನಿರ್ವಾಹಕನ ಮೇಲೂ ಹಲ್ಲೆ ಮಾಡಿದ್ದಾರೆ.

ಇನ್ನು ಮಾರ್ಚ 31 ಯುಗಾದಿ ಸಂದರ್ಭದಲ್ಲಿ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಿ ಕರ್ನಾಟಕದ ವಾಹನಗಳ ಗಾಜು ಒಡೆದು ಹಾಕಲಾಗಿತ್ತು. ನೀರಿನ ವಿಚಾರವಾಗಿ ಬಾಗಲಕೋಟೆ ಮೂಲದ ಶ್ರೀಶೈಲ್ ವಾರಿಮಠ ಎಂಬ ಯುವಕನ ಮೇಲೆ ಹಲ್ಲೆ ನಡೆದಿತ್ತು. ಇದೀಗ ಮತ್ತೇ ಅದೇ ಕ್ಯಾತೆಯನ್ನು ತೆಗೆದು ಕೃತ್ಯ ಎಸಗಿದ್ದಾರೆ.

ಶ್ರೀಶೈಲದಲ್ಲಿ ಬಸ್ ನಿಲ್ದಾಣದ‌ ಬಳಿ ಬಸ್ ನಿಲ್ಲಿಸಿ ಊಟ ಮಾಡಿ ಕಟ್ಟೆಯ ಮೇಲೆ ಮಲಗಿದ್ದಾಗ ಏಕಾಏಕಿ ಬಂದು 10-12 ಜನ ಪುಂಡರ ಗುಂಪು ಕನ್ನಡಿಗರ ಬಗ್ಗೆ ಆಶ್ಲೀಲ ಪದ ಬಳಸಿ, ಉದ್ದೇಶ ಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಇದರಿಂದ ಚಾಲಕನ ಮುಖ ಹಾಗೂ ಕಾಲಿನ ಭಾಗಕ್ಕೆ ತೀವ್ರ ರಕ್ತ ಸ್ರಾವವಾಗಿದೆ.

ಇನ್ನು ಚಾಲಕ ಬಸವರಾಜ್ ಚೀರಾಟ ಕೇಳಿ ಓಡಿ ಬಂದ ಇತರೆ ಚಾಲಕರು ಹಾಗೂ ನಿರ್ವಾಹಕರು ಬರುತ್ತಿದ್ದಂತೆ ಅಲ್ಲಿಂದ ಓಡಿ ಹೋದ ದುಷ್ಕರ್ಮಿಗಳು.

ಈ ಘಟನೆಗೆ ಸಂಬಂಧಿಸಿದಂತೆ ಶ್ರೀಶೈಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಟ್ಟಿನಲ್ಲಿ ಶ್ರೀಶೈಲದಲ್ಲಿ ಕನ್ನಡಿಗರಿಗೆ ಸುರಕ್ಷತೆ ಇದೆಯಾ ಎಂಬುದರ ಬಗ್ಗೆ ಸಂಶಯ ಕಾಡುತ್ತಿದೆ.

RELATED ARTICLES
- Advertisment -
Google search engine

Most Popular

Recent Comments