Tuesday, August 26, 2025
Google search engine
HomeUncategorizedಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ..? : ಮುರುಗೇಶ ನಿರಾಣಿ

ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ..? : ಮುರುಗೇಶ ನಿರಾಣಿ

ವಿಜಯಪುರ : ಎಲ್ಲ ಕ್ವಾಲಿಟಿಗಳು ವಿಜಯೇಂದ್ರಗೆ ಇದೆ ಅನ್ನೋದ್ರಲ್ಲಿ ಯಾವುದೆ ಅನುಮಾನ ಇಲ್ಲ ಎಂದು ವಿಜಯಪುರದಲ್ಲಿ‌ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯೇಂದ್ರಗೆ ನಾಯಕನಾಗುವ ಎಲ್ಲ ಕ್ವಾಲಿಟಿ ಇವೆ. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದರು. ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ. ಅದನ್ನ ನಿರ್ಧಾರ ಮಾಡುವವರು ರಾಜ್ಯ, ರಾಷ್ಟ್ರ ನಾಯಕರಿದ್ದಾರೆ. ಎಲ್ಲ ಕ್ವಾಲಿಟಿಗಳು ವಿಜಯೇಂದ್ರಗೆ ಇದೆ ಅನ್ನೋದ್ರಲ್ಲಿ ಯಾವುದೆ ಅನುಮಾನ ಇಲ್ಲ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್ ಗೆ ಬಿಟ್ಟದ್ದು ಸಚಿವ ಸಂಪುಟ ವಿಸ್ತರಣೆಯು ಪಕ್ಷದ ನಾಯಕರಿಗೆ ಬಿಟ್ಟದ್ದು ಎಂದು ಹೇಳಿದರು.

ಅದಲ್ಲದೇ, ಬಿಎಸ್ವೈ ಸೈಡ್‌ಲೈನ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ನಿರಾಣಿ ವಾಗ್ದಾಳಿ ಮಾಡಿದ ಅವರು ಕಾಂಗ್ರೆಸ್ ಮೊದಲು ಅವರ ಪಕ್ಷ ಸರಿ ಮಾಡಿಕೊಳ್ಳಲಿ. ಯಡಿಯೂರಪ್ಪ ನಮ್ಮ ಪಕ್ಷದ ಮುಖಂಡರು, ಎರಡು ಮಾತೇ ಇಲ್ಲ. ಒಂದು ಕುಟುಂಬದಲ್ಲಿ ಮೂರು ಸೀಟ್ ಇದೆ ದೇಶದಲ್ಲೆ ಯಾರಿಗು ಕೊಟ್ಟಿಲ್ಲ. ಇದು ಎಲ್ಲರಿಗು ಗೊತ್ತಿರೋದೆ. ವಿಜಯೇಂದ್ರ ಹೆಚ್ಚಿನ ಕೆಲಸ ಮಾಡಲಿ, ಬೆಳೆಯಲಿ ಎನ್ನುವುದು ಇದೆ. ವಿಜಯೇಂದ್ರ 30 ವರ್ಷಗಳಿಂದ ಗೊತ್ತು. ಮುಂದೆ ಯಡಿಯೂರಪ್ಪ, ಸಂಘಪರಿವಾರ, ಹಿರಿಯರ ಆಶೀರ್ವಾದ ಮಾರ್ಗದರ್ಶನದಿಂದ ಎತ್ತರಕ್ಕೆ ಬೆಳೆಯುತ್ತಾನೆ ಎಂದರು.

RELATED ARTICLES
- Advertisment -
Google search engine

Most Popular

Recent Comments